Showing 20 of 567 posts • Page 1 of 29
ಸುಮಾರು 240 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಇಂಡೋನೇಷ್ಯಾದ ಪ್ರಯಾಣಿಕ ಹಡಗೊಂದು ಜಾವಾ ಸಮುದ್ರದಲ್ಲಿ ಸಂಪರ್ಕ ಕಳೆದುಕೊಂಡಿದ್ದು, ಪ್ರಯಾಣಿಕರ ಸುರಕ್ಷತೆ ಕುರಿತು ಆತಂಕ ಹೆಚ್ಚಾಗಿದೆ. ಪೂರ್ವ ಜಾವಾದಿಂದ ಬೊರ್ನಿಯೊ ದ್ವೀಪದತ್ತ ಸಾಗುತ್ತಿದ್ದ ಹಡಗು ಪ್ರತಿಕೂಲ ಹವಾಮಾನಕ್ಕೆ ಸಿಲುಕಿದ ಬಳಿಕ ಸಂವಹನ ಕಡಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂಟರ್ನೆಟ್ ಸಂಪರ್ಕದಲ್ಲಿ ಪದೇಪದೇ ಅಡಚಣೆ ಉಂಟಾಗಿದ್ದರಿಂದ ಬೇಸರಗೊಂಡ 52 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ.
ಇಂಡೋನೇಷ್ಯಾದ ಪ್ರಸಿದ್ಧ ‘ಅನಾಕ್ ಕ್ರಾಕಟೋವ್’ ಅಗ್ನಿಪರ್ವತ ಭಾನುವಾರ ಭೀಕರವಾಗಿ ಸ್ಫೋಟಗೊಂಡಿದೆ.
ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಪರಸ್ಪರ ದಾಳಿಗಳು ತೀವ್ರಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಆರು ವಾರಗಳ ಗರಿಷ್ಠ ಮಟ್ಟಕ್ಕೆ ತಲುಪಿದೆ.
ಇಂಡೋನೇಷ್ಯಾದ ಅನಕ್ ಕ್ರಾಕಟೌ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು ದೇಶದ ಪ್ರಮುಖ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ 8 ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.
ಅಮೆರಿಕದ ಕ್ಯಾಲಿಫೋರ್ನಿಯಾದ ಫ್ರೆಸ್ನೋ ನಗರದಲ್ಲಿ ಸಣ್ಣ ವಿಮಾನವೊಂದು ಪತನಗೊಂಡ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಜಗತ್ತಿನ ಅತ್ಯಂತ ಪ್ರತಿಷ್ಠಿತ ಸೌಂದರ್ಯ ಸ್ಪರ್ಧೆಗಳಲ್ಲಿ ಒಂದಾದ 73ನೇ ಆವೃತ್ತಿಯ ‘ಮಿಸ್ ವರ್ಲ್ಡ್ 2026 ಕಿರೀಟವನ್ನು ಡೊಮಿನಿಕನ್ ರಿಪಬ್ಲಿಕ್ನ ಜೊಹೈರಿ ಮೋಲಾ ಡೊಮಿಂಗುಯೆಜ್ ತಮ್ಮದಾಗಿಸಿಕೊಂಡಿದ್ದಾರೆ.
ಅಮೆರಿಕದಲ್ಲೂ ಭೀಕರ ಪ್ರವಾಸ ಸಂಭವಿಸಿದೆ. ಅಮೆರಿಕದ ಗ್ರ್ಯಾಂಡ್ ಕ್ಯಾನ್ಯನ್ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ 20 ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಇರಾನ್ ಮೇಲೆ ಅಮೆರಿಕ ಮತ್ತೆ ದಾಳಿ ನಡೆಸಿದೆ. ಹಾರ್ಮುಜ್ ಜಲಸಂಧಿಯಲ್ಲಿರುವ ಲಾರಕ್ ದ್ವೀಪದಲ್ಲಿ ಅಮೆರಿಕ ಇರಾನಿನ ಎರಡು ಉಡಾವಣಾ ವ್ಯವಸ್ಥೆಗಳನ್ನು ಹೊಡೆದುರುಳಿಸಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ.
ಉಕ್ರೇನ್–ರಷ್ಯಾ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಶನಿವಾರ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ, ಉಕ್ರೇನ್ ರಾಜಧಾನಿ ಕೀವ್ಗೆ ಸಮೀಪದ ಬುಚಾ ಜಿಲ್ಲೆಯಲ್ಲಿ 27 ಮಂದಿ ಮೃತಪಟ್ಟಿದ್ದಾರೆ.
ಆಮ್ ಆದ್ಮಿ ಪಕ್ಷದ ನಾಯಕ ಗುರುಪ್ರೀತ್ ಸಿಂಗ್ ಗೋಪಿ ಅವರನ್ನು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಬೈಕ್ ನಲ್ಲಿ ಬೆನ್ನಟ್ಟಿ ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಪಂಜಾಬ್ ನ ಮಮ್ಡೋಟ್ ಪಟ್ಟಣದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಜ್ಬೇಕಿಸ್ತಾನ್ಗೆ ಪ್ರವಾಸ ಕೈಗೊಂಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಉಜ್ಬೇಕಿಸ್ತಾನ್ನ ರಾಜಧಾನಿ ತಾಷ್ಕೆಂಟ್ನಲ್ಲಿ ಆಯೋಜಿಸಲಾಗಿದ್ದ ವಿಶೇಷ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಚೀನಾ-ನೇಪಾಳ ಗಡಿಯಲ್ಲಿರುವ ಟಿಬೆಟ್ನ ಗೈರಾಂಗ್ ಭೂ ಬಂದರು ಪ್ರದೇಶದಲ್ಲಿ ಭಾರೀ ಭೂಕುಸಿತ ಮತ್ತು ಹಿಮಕುಸಿತ ಸಂಭವಿಸಿದೆ.
ನೇಪಾಳ-ಚೀನಾ ಗಡಿಯ ಸಮೀಪದ ಹಿಮನದಿ ಕುಸಿದು ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 626ಕ್ಕೆ ಏರಿಕೆಯಾಗಿದೆ. ಈಗಾಗಲೇ 4,400ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದ್ದು, 2,400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಉಕ್ರೇನ್ನ ರಾಜಧಾನಿ ಕೀವ್ ಮೇಲೆ ರಾತ್ರಿ ಪೂರ್ತಿ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದಾರೆ.
ನೇಪಾಳದ ರುಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಪ್ರವಾಹದಲ್ಲಿ, ಕನಿಷ್ಠ 300 ಭಾರತೀಯ ಪ್ರಜೆಗಳು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖನಾಲ್ ಮಾಹಿತಿ ನೀಡಿದ್ದಾರೆ.
ಅಮೆರಿಕದ ಟ್ರಂಪ್ ಆಡಳಿತವು ಜಾಗತಿಕವಾಗಿ ಈಗಾಗಲೇ ಸಲ್ಲಿಕೆಯಾಗಿರುವ ವಲಸಿಗರ ವೀಸಾ ಅರ್ಜಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಉತ್ತರ ನೇಪಾಳದಲ್ಲಿ ಬುಧವಾರ ಮುಂಜಾನೆ ದಿಢೀರ್ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಗಡಿ ಭಾಗದ ಗ್ರಾಮಗಳು ಜಲಾವೃತಗೊಂಡಿದ್ದು, ಎಂಟು ಮಂದಿ ಸಾವನಪ್ಪಿದ್ದಾರೆ.
ಉತ್ತರಾಖಂಡದಲ್ಲಿ ಹಂದಿಜ್ವರದ ಸೋಂಕು ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆಯಲ್ಲಿ ಆತಂಕ ಮೂಡಿಸಿದೆ. ಆಗಸ್ಟ್ 1ರಿಂದ ಈವರೆಗೆ ರಾಜ್ಯದಲ್ಲಿ 49 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಮೃತಪಟ್ಟಿದ್ದಾರೆ.