ನವದೆಹಲಿ: ಅನರ್ಹಗೊಂಡಿರುವ ಶಾಸಕರ ಕ್ಷೇತ್ರಗಳಿಗೆ ಅ.21ರಂದು ಉಪಚುನಾವಣೆಯು ನಡೆಯಲಿದ್ದು, ಸುಪ್ರೀಂಕೋರ್ಟ್ ಅನರ್ಹ ಶಾಸಕರ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
ಅನರ್ಹ ಶಾಸಕರ ಪರವಾಗಿ ಮುಕುಲ್ ರೋಹಟ್ಗಿ ಅವರು ವಾದಿಸುತ್ತಿದ್ದಾರೆ. ಬುಧವಾರ ಅನರ್ಹ ಶಾಸಕರ ಪರವಾಗಿ ವಾದ ಮಂಡಿಸಲು ಸುಪ್ರೀಂಕೋರ್ಟ್ ಸೂಚಿಸಿದೆ.
ತಮ್ಮನ್ನು ಅನರ್ಹಗೊಳಿಸಿರುವುದು ಅಕ್ರಮ ಎಂದು ಅನರ್ಹ ಶಾಸಕರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಇದಕ್ಕೆ ಪ್ರತಿಕ್ರಿಯಿಸುವಂತೆ ಸ್ಪೀಕರ್, ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿ ಮಾಡಿದೆ.