News Karnataka Kannada
Friday, May 10 2024
ವಿದೇಶ

ಅಫ್ಘಾನ್‌ ಬಿಕ್ಕಟ್ಟು: 26ರಂದು ಸರ್ವ ಪಕ್ಷ ಸಭೆ

Jai Shankar Delhi 29 6 21
Photo Credit :

ನವದೆಹಲಿ: ಅಫ್ಘಾನಿಸ್ತಾನದಲ್ಲಿ ಉದ್ಭವವಾಗಿರುವ ಪರಿಸ್ಥಿತಿ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆಗೆ ಕರೆ ನೀಡಿದೆ. ಈ ತಿಂಗಳ 26ರಂದು ಸಭೆ ನಡೆಯಲಿದೆ.

ಅಫ್ಘಾನಿಸ್ತಾನದ ಪರಿಸ್ಥಿತಿ, ಭಾರತ ಅನುಸರಿಸಬೇಕಾದ ನಿಲುವಿನ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ಅಫ್ಘಾನಿಸ್ತಾನಲ್ಲಿನ ಬೆಳವಣಿಗೆಗಳನ್ನು ರಾಜಕೀಯ ಪಕ್ಷಗಳಿಗೆ ವಿವರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಾಂಗ ಸಚಿವಾಲಯಕ್ಕೆ ಸೂಚಿಸಿದ್ದಾರೆ. ಈ ವಿಷಯವನ್ನು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್ ಜೈ ಶಂಕರ್ ಅವರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ತಾಲಿಬಾನ್ ಆಕ್ರಮಣದ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದಿಂದ ಎಲ್ಲಾ ದೇಶಗಳು ತಮ್ಮ ರಾಜತಾಂತ್ರಿಕ ಸಿಬ್ಬಂದಿ ಹಾಗೂ ನಾಗರಿಕರನ್ನು ಸ್ಥಳಾಂತರಿಸುತ್ತಿವೆ. ಭಾರತ ಕೂಡ ಆ ದೇಶದಿಂದ ವಿಮಾನಗಳ ಮೂಲಕ ಸ್ಥಳಾಂತರ ಪ್ರಕ್ರಿಯೆ ನಡೆಸುತ್ತಿದೆ. ಆಗಸ್ಟ್ 16 ರಂದು ಆರಂಭಗೊಂಡ ಸ್ಥಳಾಂತರ ಪ್ರಕ್ರಿಯೆ ಈಗ ಅಂತಿಮ ಹಂತದಲ್ಲಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು