ನವದೆಹಲಿ: ಪಾಕ್ ವಶದಲ್ಲಿರುವ ಭಾರತೀಯ ವಾಯು ಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಪಾಕ್ ಇಂದು ಭಾರತಕ್ಕೆ ಒಪ್ಪಿಸಲಿದೆ. ಈ ಹಿನ್ನೆಲೆ ಭಾರತಕ್ಕೆ ಬಂದ ಬಳಿಕ ಅವರನ್ನು ದೆಹಲಿಗೆ ಕರೆದೊಯ್ಯಲಾಗುತ್ತದೆ. ಮಧ್ಯಾಹ್ನದ ವೇಳೆಗೆ ಅಭಿನಂದನ್ ಅವರನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಪಾಕ್ ಹೇಳಿದೆ.
ಪಾಕ್ ವಾಯುಪಡೆಯ ಮೂರು ಫೈಟರ್ ಜೆಟ್ ವಿಮಾನ ಗಡಿಯನ್ನು ಉಲ್ಲಂಘಿಸಿ ಒಳನುಗ್ಗಿ ಬಂದಾಗ ಅವುಗಳನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಮಿಗ್ 21 ಫೈಟರ್ ಜೆಟ್ ವಿಮಾನದ ಪೈಲಟ್ ಆಗಿದ್ದ ವಿಂಗ್ ಕಮಾಂಡರ್ ಅಭಿನಂದನ್ ಅವರಿದ್ದ ವಿಮಾನ ಆಗ ಪತನಗೊಂಡಿತ್ತು. ಆಗ ಪಾಕ್ ಸೇನೆ ಅವರನ್ನು ಬಂಧಿಸಿ ತನ್ನ ವಶಕ್ಕೆ ತೆಗೆದುಕೊಂಡಿತ್ತು.
ಒಂದು ವೇಳೆ ವೀರಾ ಕಮಾಂಡರ್ ಗೆ ತೊಂದರೆ ಮಾಡಿದರೆ ನೇರವಾಗಿ ದಾಳಿ ನಡೆಸಲಾಗುವುದು ಎಂದು ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ನೀಡಿತ್ತು. ಆ ಸಂದರ್ಭದಲ್ಲಿ ಭಾರತಕ್ಕೆ ಬೆಂಬಲವಾಗಿ ಅಮೆರಿಕ, ರಷ್ಯಾ, ಫ್ರಾನ್ಸ್, ಬ್ರಿಟನ್ ಸೇರಿದಂತೆ ಹಲವು ದೇಶಗಳು ಪಾಕಿಸ್ತಾನಕ್ಕೆ ಮೇಲೆ ಒತ್ತಡ ಹೇರಿದೆ. ಈ ಹಿನ್ನೆಲೆ ಶಾಂತಿ ಕಾಪಾಡುವ ಉದ್ದೇಶದಿಂದ ಅವರು ಶುಕ್ರವಾರ ಅಭಿನಂದನ್ ಅವರನ್ನು ಬಿಡುಗಡೆ ಮಾಡುವುದಾಗಿ ಹೇಳಿತ್ತು.