ನವದೆಹಲಿ: ಅಯೋದ್ಯೆ ರಾಮ ಜನ್ಮಭೂಮಿ ಹಾಗೂ ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣ ವಿಚಾರಣೆಯ ನೇರಪ್ರಸಾರ ಹಾಗೂ ಧ್ವನಿ ಮುದ್ರಣಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶವನ್ನು ನೀಡಿದೆ. ಇಂದಿನಿಂದ ಪ್ರಕರಣದ ವಿಚಾರಣೆ ಆರಂಭವಾಗಿದೆ.
ಆಗಸ್ಟ್ 2ರಂದು ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಮಾಡಿಕೊಳ್ಳುವಲ್ಲಿ ವಿಫಲವಾದ ಹಿನ್ನೆಲೆ ವಿಚಾರಣೆಯನ್ನು 6ರಿಂದ ಪ್ರತಿನಿತ್ಯ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಐವರು ನ್ಯಾಯಧೀಶರಿರುವ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.