Categories: ವಿದೇಶ

ಆರ್ಥಿಕ ಬಿಕ್ಕಟ್ಟಿನಲ್ಲಿ ಶ್ರೀಲಂಕಾ: ಬಿಕ್ಕಟ್ಟಿನಿಂದ ಪಾರು ಮಾಡಲು ಮುಂದಾದ ಭಾರತ

ಹೊಸದಿಲ್ಲಿ : ಶ್ರೀಲಂಕಾವು ಆಳವಾದ ಆರ್ಥಿಕ ಬಿಕ್ಕಟ್ಟಿನಲ್ಲಿ ತತ್ತರಿಸುತ್ತಿದ್ದು, ರಾಜಪಕ್ಸೆ ಸರಕಾರವು ಇಂಧನ ಆಮದಿನ ಮೊತ್ತ ಪಾವತಿಸಲು ಹೆಣಗಾಡುತ್ತಿದೆ.

ಇದರಿಂದಾಗಿ ದೇಶದಲ್ಲಿ ತೀವ್ರ ವಿದ್ಯುತ್ ಕೊರತೆ ಉಂಟಾಗಿದ್ದು, ಹಿಂಸಾತ್ಮಕ ಪ್ರತಿಭಟನೆಗಳು ವರದಿಯಾಗುತ್ತಿವೆ. ಸರಕಾರವು ತುರ್ತು ಪರಿಸ್ಥಿತಿ ಘೋಷಿಸಿ, ದೇಶಾದ್ಯಂತ 36 ತಾಸುಗಳ ಕರ್ಫ್ಯೂ ವಿಧಿಸಿದೆ. ಇದೀಗ ಸುಮಾರು 600 ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.

ಈ ಸಂಕಷ್ಟದ ಸಮಯದಲ್ಲಿ ದ್ವೀಪ ರಾಷ್ಟ್ರವನ್ನು ಬಿಕ್ಕಟ್ಟಿನಿಂದ ಪಾರು ಮಾಡಲು ಭಾರತ ಮುಂದಾಗಿದೆ. ಶ್ರೀಲಂಕಾದ ತುರ್ತು ಮನವಿಗಳಿಗೆ ಭಾರತವು ತ್ವರಿತವಾಗಿ ಸ್ಪಂದಿಸಿದೆ.

ಈ ವರ್ಷದ ಜನವರಿಯಿಂದ ಶ್ರೀಲಂಕಾಕ್ಕೆ ಭಾರತದ ಬೆಂಬಲ 2.5 ಶತಕೋಟಿ ಅಮೆರಿಕನ್ ಡಾಲರ್ ಮೀರಿದೆ. ಫೆಬ್ರವರಿಯಲ್ಲಿ 500 ಮಿಲಿಯನ್ ಅಮೆರಿಕನ್ ಡಾಲರ್ ಇಂಧನ ಸಾಲಕ್ಕೆ ಸಹಿ ಹಾಕಲಾಯಿತು. ಮಾರ್ಚ್‌ ಆರಂಭದಿಂದ ಒಟ್ಟು 150,000 ಟನ್‌ಗಳಷ್ಟು ಜೆಟ್ ಏವಿಯೇಷನ್ ​​ಇಂಧನ, ಡೀಸೆಲ್ ಮತ್ತು ಪೆಟ್ರೋಲ್‌ನ ನಾಲ್ಕು ಸರಕುಗಳನ್ನು ರವಾನೆ ಮಾಡಲಾಗಿದೆ. ಮೇ ತಿಂಗಳವರೆಗೆ ಇನ್ನೂ ಐದು ಸರಕು ರವಾನೆಗಳನ್ನು ಮಾಡಲಾಗುತ್ತದೆ. ಕಳೆದ ತಿಂಗಳು ಆಹಾರ, ಔಷಧ ಮತ್ತು ಅಗತ್ಯ ವಸ್ತುಗಳಿಗೆ 1 ಶತಕೋಟಿ ಅಮೆರಿಕನ್ ಡಾಲರ್ ಮತ್ತೊಂದು ಸಾಲಕ್ಕೆ ಸಹಿ ಮಾಡಲಾಗಿದೆ ಎಂದು ಶ್ರೀಲಂಕಾದಲ್ಲಿನ ಭಾರತದ ಹೈ ಕಮಿಷನರ್ ಗೋಪಾಲ್ ಬ್ಯಾಗ್ಲಿ ತಿಳಿಸಿದ್ದಾರೆ.

ಈ ಸಾಲ ಸೌಲಭ್ಯದ ಅಡಿಯಲ್ಲಿ ಭಾರತದಿಂದ ಅಕ್ಕಿಯ ಮೊದಲ ರವಾನೆಯು ಶ್ರೀಲಂಕಾಕ್ಕೆ ಶೀಘ್ರದಲ್ಲೇ ಆಗಮಿಸುವ ನಿರೀಕ್ಷೆಯಿದೆ ಎಂದು ಬ್ಯಾಗ್ಲಿ ಹೇಳಿದ್ದಾರೆ. ಇದಲ್ಲದೆ, ಭಾರತೀಯ ರಿಸರ್ವ್ ಬ್ಯಾಂಕ್ 400 ಮಿಲಿಯನ್ ಅಮೆರಿಕನ್ ಡಾಲರ್ ಕರೆನ್ಸಿ ಸ್ವಾಪ್ ಅನ್ನು ವಿಸ್ತರಿಸಿದೆ. ನೂರಾರು ಮಿಲಿಯನ್ ಡಾಲರ್ ಮೌಲ್ಯದ ಏಷ್ಯನ್ ಕ್ಲಿಯರೆನ್ಸ್ ಯೂನಿಯನ್ ಅಡಿಯಲ್ಲಿ ಶ್ರೀಲಂಕಾದ ಸೆಂಟ್ರಲ್ ಬ್ಯಾಂಕ್ ಬಾಕಿಯಿರುವ ಪಾವತಿಗಳನ್ನು ಮುಂದೂಡಿದೆ.

ತೀವ್ರ ವಿದ್ಯುತ್ ಕಡಿತಕ್ಕೆ ಸಾಕ್ಷಿಯಾಗಿರುವ ದ್ವೀಪ ರಾಷ್ಟ್ರದಲ್ಲಿನ ವಿದ್ಯುತ್ ಬಿಕ್ಕಟ್ಟನ್ನು ನಿವಾರಿಸಲು ಸಹಾಯ ಮಾಡಲು ಭಾರತವು ಶನಿವಾರ 40,000 ಮಿಲಿಯನ್ ಡೀಸೆಲ್ ಅನ್ನು ಶ್ರೀಲಂಕಾಕ್ಕೆ ತಲುಪಿಸಿದೆ. ಕಳೆದ 50 ದಿನಗಳಲ್ಲಿ ಭಾರತವು ದ್ವೀಪ ರಾಷ್ಟ್ರಕ್ಕೆ ಸುಮಾರು 200,000 ಮಿ.ಟನ್ ಇಂಧನವನ್ನು ಪೂರೈಸಿದೆ. ಈ ಸಮಯದಲ್ಲಿ ಶ್ರೀಲಂಕಾದ ಜನರಿಗೆ ಭಾರತದ ತ್ವರಿತ ನೆರವು ಶ್ರೀಲಂಕಾ ಸಮಾಜದ ಎಲ್ಲಾ ವರ್ಗಗಳಿಂದ ಮೆಚ್ಚುಗೆ ಪಡೆದಿದೆ ಎಂದು ಶ್ರೀಲಂಕಾದ ಭಾರತೀಯ ಹೈಕಮಿಷನರ್ ತಿಳಿಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಕುಸಿತದಿಂದಾಗಿ ಶ್ರೀಲಂಕಾದ ಆರ್ಥಿಕತೆಯು ಪತನದಲ್ಲಿದೆ.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

5 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago