News Karnataka Kannada
Saturday, May 18 2024
ವಿದೇಶ

ಇಂಡೋನೇಷ್ಯಾದಲ್ಲಿ ಭೂಕಂಪ: 20ಕ್ಕೂ ಅಧಿಕ ಮಂದಿ ಸಾವು

Photo Credit :

ಇಂಡೋನೇಷ್ಯಾದಲ್ಲಿ ಭೂಕಂಪ: 20ಕ್ಕೂ ಅಧಿಕ ಮಂದಿ ಸಾವು

ಜಕಾರ್ತ: ಇಂಡೋನೇಷ್ಯಾದ ಅಕೇಹ್ ಪ್ರಾಂತ್ಯದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಪ್ರಬಲ ಭೂಕಂಪನದಿಂದಾಗಿ 20ಕ್ಕೂ ಹೆಚ್ಚು ಜನರು ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ.

ಬಂಡಾ ಎಸಿಯಾದಲ್ಲಿ ಭೂಕಂಪವು ಸುಮಾರು 20 ಕಿಲೋಮೀಟರ್ ಉತ್ತರಕ್ಕೆ 90 ಕಿಲೋಮೀಟರ್ ಮತ್ತು ಆಳಕ್ಕೆ 8.2 ಕಿಲೋ ಮೀಟರ್ ಆಳಕ್ಕೆ ಸಂಭವಿಸುರುವುದಾಗಿ ಯು ಎಸ್ ಜಿಯಾಲಜಿಕಲ್ ಸರ್ವೆ ತಿಳಿಸಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.5ರಷ್ಟು ದಾಖಲಾಗಿದ್ದು, ಭೂಕಂಪನದ ತೀವ್ರತೆಗೆ ಹಲವು ಕಟ್ಟಡಗಳು ನೆಲಕ್ಕುರುಳಿವೆ. ಇಂಡೋನೇಷ್ಯಾದ ಸುಮಾತ್ರಾ ದ್ವೀಪದಲ್ಲಿರುವ ಅಕೇಹ್ ಪ್ರಾಂತ್ಯದಲ್ಲಿ ಭೂಕಂಪನದ ಕೇಂದ್ರ  ಬಿಂದು ದಾಖಲಾಗಿದ್ದು, ಹಲವಾರು ಮನೆಗಳು ನೆಲಸಮಗೊಂಡಿವೆ. ಪರಿಣಾಮ 25ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಅವಶೇಷಗಳಡಿಯಲ್ಲಿ ನೂರಾರು ಮಂದಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

ಭೂಕಂಪದಿಂದ ಅನೇಕ ಮಂದಿ ಗಾಯಗೊಂಡಿರುವ ಪರಿಣಾಮ ರೆಡ್ ಕ್ರಾಸ್ ಸಂಸ್ಥೆ ಗಾಯಾಳುಗಳಿಗೆ ಬೀದಿಗಳಲ್ಲಿಯೆ ಚಿಕಿತ್ಸೆ ನೀಡುತ್ತಿದೆ. ಇಂಡೋನೇಷಿಯಾದಲ್ಲಿ ಭೂಕಂಪನದಿಂದಾಗಿ ಜಕಾರ್ತಾ, ಸುಮಾತ್ರಾ, ಎಸಿಯಾದಲ್ಲಿ ಸುಮಾರು ಮೂವತ್ತು ನಿಮಿಷಗಳಲ್ಲಿ ಭಾರಿ ಅನಾಹುತ ಸೃಷ್ಟಿಸಿದೆ.

ಇನ್ನು ಸ್ಥಳೀಯ ಆಸ್ಪತ್ರೆಗಳಲ್ಲಿ ಸುಮಾರು 100ಕ್ಕೂ ಅಧಿಕ ಗಾಯಾಳುಗಳು ದಾಖಲಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರೆಸಲಾಗುತ್ತಿದೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಸ್ಥಳೀಯರು ಕೂಡ ರಕ್ಷಣಾ  ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು