ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನೇಪಾಳದ ವಿದೇಶಾಂಗ ಸಚಿವ ಪ್ರದೀಪ್ ಕುಮಾರ್ ಗ್ಯಾವಲಿ ಅವರನ್ನು ಭೇಟಿಯಾಗಲಿರುವರು.
ಕಳೆದ ಕೆಲವು ತಿಂಗಳುಗಳಿಂದ ಭಾರತ ಮತ್ತು ನೇಪಾಳದ ಗಡಿಯಲ್ಲಿ ವಿವಾದವು ಉಂಟಾಗಿದ್ದು, ಈ ಭೇಟಿಯು ಹೆಚ್ಚಿನ ಮಹತ್ವ ಪಡೆದಿದ್ದು, ಗಡಿಯಲ್ಲಿನ ಕೆಲವು ಗ್ರಾಮಗಳನ್ನು ನೇಪಾಳದ ಭೂಪಟಕ್ಕೆ ಸೇರಿಸಿರುವ ಸಹಿತ ಹಲವಾರು ವಿಚಾರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆಯಿದೆ.
ಮಾತುಕತೆಯಿಂದ ನೇಪಾಳದೊಂದಿಗಿನ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ರಾಜನಾಥ್ ಸಿಂಗ್ ಅವರು ಈ ಹಿಂದೆ ಹೇಳಿದ್ದರು.