ನವದೆಹಲಿ: ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನೀಡಿದ ಜಾಮೀನು ರದ್ದು ಮಾಡಬೇಕೆಂದು ಜಾರಿ ನಿರ್ದೇಶನಾಲಯವು ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ನ್ಯಾಯಮೂರ್ತಿ ಆರ್. ಎಫ್. ನಾರಿಮನ್ ಅವರು ಇ.ಡಿ. ಅರ್ಜಿ ತಳ್ಳಿಹಾಕಿದೆ. ಇದೇ ವೇಳೆ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯು ನಾರಿಕರನ್ನು ಈ ರೀತಿ ನಡೆಸಿಕೊಳ್ಳಬಾರದು ಎಂದು ಇದೇ ವೇಳೆ ಅಭಿಪ್ರಾಯಪಟ್ಟಿದೆ.
ಡಿಕೆಶಿ ವಿರುದ್ಧ ಈಗಾಗಲೇ ಅನೂರ್ಜಿತವಾಗಿರುವ 45ನೇ ಸೆಕ್ಷನ್ ಅನುಸಾರ ಪ್ರಕರಣ ದಾಖಲಿಸಿಕೊಂಡಿರುವುದನ್ನು ಶಿವಕುಮಾರ್ ಅವರ ವಕೀಲರು ಉಲ್ಲೇಖಿಸಿದರು. ಇದರಿಂದ ನ್ಯಾಯಮೂರ್ತಿಗಳು ಸಿಟ್ಟುಗೊಂಡು, ಈ ರೀತಿಯಾಗಿ ನಾಗರಿಕರನ್ನು ನಡೆಸಿಕೊಳ್ಳಬಾರದು ಎಂದು ಎಚ್ಚರಿಸಿದರು.