ಯುದ್ಧಪೀಡಿದ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಇಂದು 249 ದೇಶವಾಸಿಗಳು ತಾಯ್ನಾಡಿಗೆ ಮರಳಿದ್ದಾರೆ.
ಆಪರೇಷನ್ ಗಂಗಾದಡಿ ವಿಶೇಷ ಕಾರ್ಯಾಚರಣೆಯ ಐದನೇ ವಿಮಾನ ಉಕ್ರೇನ್ನಿಂದ ಇಂದು ಮುಂಜಾನೆ ದೆಹಲಿ ತಲುಪಿದೆ. ಉಕ್ರೇನ್ನಿಂದ ರೊಮೇನಿಯಾ ಗಡಿಗೆ ಬಂದ ಬಳಿಕ ನಮಗೆ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಸಾಕಷ್ಟು ಸಹಾಯ ಮಾಡಿದ್ದಾರೆ. ಸುರಕ್ಷಿತವಾಗಿ ಭಾರತಕ್ಕೆ ಕರೆತಂದಿದ್ದಾರೆ.
ಇನ್ನೂ ವಿದ್ಯಾರ್ಥಿಗಳು ಉಕ್ರೇನ್ನಲ್ಲಿ ಸಿಲುಕಿದ್ದಾರೆ ಎಂದು ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ. ಈವರೆಗೂ ಉಕ್ರೇನ್ನಲ್ಲಿ ಸಿಲುಕಿದ್ದ ಎರಡು ಸಾವಿರಕ್ಕೂ ಹೆಚ್ಚು ಭಾರತೀಯರನ್ನು ತಾಯ್ನಾಡಿಗೆ ಕರೆತರಲಾಗಿದೆ.