News Karnataka Kannada
Monday, April 29 2024
ವಿದೇಶ

ಉಕ್ರೇನ್ ಸ್ಥಿತಿ ಬಗ್ಗೆ ಭಾರತ, ಫ್ರಾನ್ಸ್ ವಿದೇಶಾಂಗ ಸಚಿವರ ಸುದೀರ್ಘ ಮಾತುಕತೆ

Jai Shankar
Photo Credit : Twitter

ಪ್ಯಾರಿಸ್: ದ್ವಿಪಕ್ಷೀಯ ಸಹಕಾರ, ಉಕ್ರೇನ್ ಪರಿಸ್ಥಿತಿ ಮತ್ತು ಇಂಡೋ-ಪೆಸಿಫಿಕ್ ಸಹಕಾರ ಸೇರಿದಂತೆ ಹಲವು ವಿಚಾರಗಳ ಕುರಿತು ಫ್ರಾನ್ಸ್ ವಿದೇಶಾಂಗ ಸಚಿವ ಜೀನ್-ವೆಸ್ ಲೆ ಡ್ರಿಯಾನ್ ಅವರೊಂದಿಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್‌ ಮಾತುಕತೆ ನಡೆಸಿದ್ದಾರೆ.

‘ಪ್ಯಾರಿಸ್‌ಗೆ ಆಗಮಿಸಿದ್ದೇನೆ. ಉಕ್ರೇನ್ ಪರಿಸ್ಥಿತಿ, ವಿದೇಶಾಂಗ ಸಚಿವ ಜೀನ್-ವೆಸ್ ಲೆ ಡ್ರಿಯಾನ್ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದೇನೆ.ಇಂಡೋ-ಫೆಸಿಫಿಕ್ ಮತ್ತು ಜಂಟಿ ಸಮಗ್ರ ಕ್ರಿಯಾ ಯೋಜನೆ ಮೇಲಿನ ಚರ್ಚೆಯು ಪರಸ್ಪರ ನಂಬಿಕೆ ಮತ್ತು ಜಾಗತಿಕ ಪಾಲುದಾರಿಕೆಯನ್ನು ಪ್ರತಿಬಿಂಬಿಸುತ್ತವೆ. ಇಂಡೋ-ಪೆಸಿಫಿಕ್‌ ಸಹಕಾರಕ್ಕೆ ಸಂಬಂಧಿಸಿದಂತೆ ಯುರೋಪಿಯನ್ ಒಕ್ಕೂಟದ ಮಂತ್ರಿಗಳ ವೇದಿಕೆಯಲ್ಲಿ ಚರ್ಚಿಸಲು ಎದುರುನೋಡುತ್ತಿದ್ದೇವೆ’ ಎಂದು ಸಂಬಂಧ ಟ್ವಿಟರ್‌ನಲ್ಲಿ ಮಾಹಿತಿ ತಿಳಿಸಿದ್ದಾರೆ.

ಜೈಶಂಕರ್ ಅವರು ಭಾನುವಾರದಿಂದ ಮೂರು ದಿನಗಳ ಭೇಟಿ ಸಲುವಾಗಿ ಫ್ರಾನ್ಸ್‌ಗೆ ಆಗಮಿಸಿದ್ದಾರೆ. ಫೆಬ್ರುವರಿ 22ರಂದು ಯುರೋಪಿಯನ್ ಒಕ್ಕೂಟದ ಮಂತ್ರಿಗಳ ವೇದಿಕೆಯಲ್ಲಿ ಭಾಗವಹಿಸಲಿದ್ದಾರೆ.

ಜೈಶಂಕರ್ ಅವರು ಜರ್ಮನಿಯಲ್ಲಿ ನಡೆದ ಮ್ಯೂನಿಚ್ ಭದ್ರತಾ ಸಮ್ಮೇಳನ-2022, ಯುರೋಪ್, ಏಷ್ಯಾ ಮತ್ತು ಪ್ರಪಂಚದ ಇತರ ಭಾಗಗಳ ಸಚಿವರುಗಳೊಂದಿಗೆ ಸರಣಿ ಸಭೆಗಳಲ್ಲಿ ಭಾಗವಹಿಸಿದ ಬಳಿಕ ಫ್ರಾನ್ಸ್‌ಗೆ ಆಗಮಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು