ಗೋರಖಪುರ: ಉತ್ತರಪ್ರದೇಶದ ಎರಡು ಲೋಕಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷವು ಹಿನ್ನಡೆ ಪಡೆದು ಸಮಾಜವಾದಿ ಪಕ್ಷದ ಅಭ್ಯರ್ಥಿಗಳು ಮುನ್ನಡೆಯನ್ನು ಸಾಧಿಸಿದ್ದಾರೆ. ಆಡಳಿತಾರೂಢ ಬಿಜೆಪಿಯನ್ನು ಹಿಂದಿಕ್ಕಿ ಸಮಾಜವಾದಿ ಪಕ್ಷ ಮುನ್ನಡೆ ಸಾಧಿಸಿರುವುದಿಂದ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸತತ 5 ಬಾರಿ ಗೆಲುವು ಸಾಧಿಸಿದ್ದ ಗೋರಖಪುರ ಲೋಕಸಭಾ ಕ್ಷೇತ್ರದಲ್ಲಿ ಎರಡು ಸುತ್ತಿನ ಮತ ಎಣಿಕೆ ಪೂರ್ಣವಾಗುತ್ತಿದ್ದ ಮುನ್ನಡೆಯಲ್ಲಿದ್ದ ಬಿಜೆಪಿಯನ್ನು ಸಮಾಜವಾದಿ ಪಕ್ಷ ಹಿಂದಿಕ್ಕಿ ಮುನ್ನಡೆಯನ್ನು ಸಾಧಿಸಿತು.