ನವದೆಹಲಿ: ಇಂದು ಉಭಯ ಸದನದಲ್ಲಿ ನಡೆದ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದ ತೀವ್ರ ಗದ್ದಲದಿಂದ ಸಂಸತ್ ಉಭಯ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.
ಉಭಯ ಕಲಾಪಗಳಲ್ಲಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಉದ್ಯಮಿ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸುಮಾರು 11, 300 ಕೋಟಿ ರೂ.ಗಳನ್ನು ವಂಚನೆ ಪ್ರಕರಣವನ್ನು ತೀವ್ರ ತರಾಟೆಗೆ ತೆಗೆದುಕೊಂಡವು.
ಕಲಾಪ ಪ್ರಾರಂಭವಾಗುತ್ತದ್ದಂತೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಪಕ್ಷದವರು ತರಾಟೆಗೆ ತೆಗೆದುಕೊಂಡರು. ಈ ಕುರತಿಉ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಪಟ್ಟು ಹಿಡಿದವು.
ಈ ನಿಟ್ಟಿನಲ್ಲಿ ರಾಜ್ಯ ಸಭೆ ಹಾಗೂ ಲೋಕಸಭೆ ಕಲಾಪವನ್ನುನಾಳೆಗೆ ಮುಂದೂಡಿಕೆ ಮಾಡಲಾಯಿತು.