News Karnataka Kannada
Monday, May 20 2024
ವಿದೇಶ

ಎಟಿಎಂಗಳಲ್ಲಿ ಹಣದ ಕೊರತೆ: ಜನರ ಪರದಾಟ

Photo Credit :

ಎಟಿಎಂಗಳಲ್ಲಿ ಹಣದ ಕೊರತೆ: ಜನರ ಪರದಾಟ

ನವದೆಹಲಿ: ದೇಶದ ಹಲವಾರು ರಾಜ್ಯಗಳ ಎಟಿಎಂಗಳಲ್ಲಿ ಹಣದ ಕೊರತೆ ಉಂಟಾಗಿದ್ದು, ಇದರಿಂದಾಗಿ ಜನರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ.

ಕರ್ನಾಟಕ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶ ಸಹಿತ ಹಲವಾರು ರಾಜ್ಯಗಳಲ್ಲಿ ಹಣದ ಕೊರತೆಯಿದೆ ಎಂದು ವರದಿಗಳು ಹೇಳಿವೆ. ಸಮಸ್ಯೆಯು ಮುಂದಿನ ಒಂದೆರಡು ದಿನಗಳಲ್ಲಿ ನಿವಾರಣೆಯಾಗುವುದು ಎಂದು ಕೇಂದ್ರ ಸರ್ಕಾರವು ತಿಳಿಸಿದೆ.

ಎಟಿಎಂಗಳಲ್ಲಿ ಎಲ್ಲಿ ಹೋದರೂ ಜನರಿಗೆ ಹಣದ ಕೊರತೆ ಕಂಡುಬಂದಿದೆ. ಕೆಲವು ಕಡೆಗಳಲ್ಲಿ ಹಣಕ್ಕಾಗಿ ಜನರು ಸಾಲುಗಟ್ಟಿ ನಿಂತಿರುವುದು ಕಂಡುಬಂದಿದೆ. ಇದು ನೋಟು ಅಮಾನ್ಯದ ದಿನಗಳನ್ನು ನೆನಪಿಸುವಂತಿದೆ.

ಕೇಂದ್ರ ಸರ್ಕಾರವು ಎಟಿಎಂಗಳಲ್ಲಿ ಹಣದ ಕೊರತೆ ಉಂಟು ಮಾಡಿ ಜನರನ್ನು ಮತ್ತೆ ನೋಟು ಅಮಾನ್ಯದ ದಿನಗಳತ್ತು ದೂಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು