ತೆಲಂಗಾಣ : ಎಸಿಬಿ ದಾಳಿಗೆ ಹೆದರಿ ಅಧಿಕಾರಿಯ ಸಹಚರನೊಬ್ಬ ಒಂದು ಅಜಾಗರೂಕತೆಯ ಹಾಗೂ ಹಾಸ್ಯಾಸ್ಪದ ವಾದಂತಹ ಘಟನೆಗೆ ಎಡೆಮಾಡಿಕೊಟ್ಟಿದ್ದರೆ. ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಎಬಿಸಿ ಅಧಿಕಾರಿಗಳ ದಾಳಿಗೆ ಹೆದರಿ 5 ಲಕ್ಷ ರೂ . ನಗದು ಸುಟ್ಟು ಹಾಕುವ ಯತ್ನ ನಡೆದಿದೆ .
ನೋಟು ಸುಡುತ್ತಿರುವ ಸಂದರ್ಭದಲ್ಲಿ, ಎಸಿಬಿ ಅಧಿಕಾರಿಗಳು ಬಲವಂತವಾಗಿ ಬಾಗಿಲು ತೆಗೆದಾಗ ನೋಟುಗಳು ಶೇ .70 ರಷ್ಟು ಸುಟ್ಟು ಬಸ್ಮಾ ಬಾಗಿರುವುದು ಕಂಡುಬಂದಿದ್ದು, ಅಧಿಕಾರಿಗಳು ಆ ಸುಟ್ಟ ನೋಟುಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ .
ಇದರ ವಿಚಾರಣೆಯ ವೇಳೆ ಸತ್ಯಸಂಗತಿಗಳು ಹೊರಬಿದ್ದಿದ್ದು, ರಂಗಾರೆಡ್ಡಿ ಜಿಲ್ಲೆಯ ತಲಕೊಂಡಪಲ್ಲಿ ಮಂಡಲದ ಕೊರೆಂಟಕುಂಟ್ ಸರ್ಪಂಚ್ ರಾಮುಲು ಅವರು ಬೊಲಾಂಪಲ್ಲಿ ಎಂಬಲ್ಲಿ ಗಣಿಗಾರಿಕೆ ನಡೆಸಲು ಅರ್ಜಿ ಸಲ್ಲಿಸಿದ್ದರು . ಈ ಸಂಬಂಧ ವೆಲ್ಕಂಡ ತಹಸೀಲ್ದಾರ್ ಅವರಿಗೆ ಪರವಾನಗಿ ನೀಡುವಂತೆ ಮತ್ತು ಸರ್ವೆ ಮಾಡುವಂತೆ ಮನವಿ ಮಾಡಿದ್ದರು . ಆದರೆ ತಹಸೀಲ್ದಾರ್ , ವೆಂಕಟಯ್ಯ ಗೌಡ್ ಅವರ ನಿವಾಸದಲ್ಲಿ ಮೀಟಿಂಗ್ ಮಾಡುವಂತೆ ಸಲಹೆ ನೀಡಿದ್ದರು . ಈ ವೇಳೆ , ವೆಂಕಟಯ್ಯ ಗೌಡ್ 6 ಲಕ್ಷ ರೂ . ಲಂಚದ ಬೇಡಿಕೆಯಿಟ್ಟಿದ್ದರು . ಅಂತಿಮವಾಗಿ ಇಬ್ಬರ ನಡುವೆ ಐದು ಲಕ್ಷ ರೂ.ಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು ಎಂದು ತಿಳಿದುಬಂದಿದೆ.
ಈ ಬಗ್ಗೆ ಸರ್ಪಂಚ್ ರಾಮುಲು ಎಸಿಬಿ ಅಧಿಕಾರಿಗಳನ್ನು ಭೇಟಿ ಮಾಡಿ ವಿಷಯ ಮುಟ್ಟಿಸಿದ್ದರು . ರಾಮುಲು ವೆಂಕಟಯ್ಯ ಅವರ ಮನೆಗೆ ತೆರಳಿ ಹಣ ನೀಡಿದ್ದರು . ಈ ವೇಳೆ ವೆಂಕಟಯ್ಯ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು . ವಿಷಯ ಗೊತ್ತಾಗುತ್ತಿದ್ದಂತೆ ವೆಂಕಟಯ್ಯ , ರಾಮುಲು ನೀಡಿದ್ದ ಐದು ಲಕ್ಷ ರೂ . ನಗದನ್ನು ಗ್ಯಾಸ್ ಸ್ಟವ್ ಮೇಲಿರಿಸಿ ಸುಟ್ಟು ಹಾಕುವ ಯತ್ನ ಮಾಡಿದ್ದಾರೆ . ಇದೇ ವಿಷಯಕ್ಕೆ ಸಂಬಂಧಪಟ್ಟಂತೆ ತಹಸೀಲ್ದಾರ್ ಸೈದುಲು ಅವರ ಎಲ್.ಬಿ. ನಗರ ನಿವಾಸದ ಮೇಲೂ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.