ಕಣ್ಣೂರು: ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶ ನಂತರ ಕೇರಳದಲ್ಲಿ ಭುಗಿಲೆದ್ದ ಪ್ರಕರಣ ಸಂಬಂಧ ಕಣ್ಣೂರಿನಲ್ಲಿ 143 ಪ್ರಕರಣ ದಾಖಲಾಗಿದೆ. ಬಿಜೆಪಿ, ಆರ್ ಎಸ್ ಎಸ್ ಮತ್ತು ಸಿಪಿಎಂ ಕಾರ್ಯಕರ್ತರ ನಡುವೆ ದಾಳಿ ನಡೆದಿದೆ.
ಸಿಪಿಎಂ ಕಾರ್ಯದರ್ಶಿ ಪಿ ಸಾಸಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಮನೆಗಳ ಮೇಲೆ ಬಾಂಬ್ ದಾಳಿ ನಡೆದಿದೆ. ಕೇರಳದ ಕೆಲವೆಡೆ ಬಿಗಿ ಬಂದೋಬಸ್ತ್ ನ್ನು ನೀಡಲಾಗಿದೆ.
ಹಿಂಸಾಚಾರ ಉಂಟಾದ ಸ್ಥಳಗಳಲ್ಲಿ ಶಾಂತಿ ಕಾಪಾಡುವಂತೆ ಜಿಲ್ಲಾಧಿಕಾರಿ ಮಿರ್ ಮೊಹಮ್ಮದ್ ಆಲಿ ಹಾಗೂ ಎಸ್ಪಿ ಶಿವ ವಿಕ್ರಮ್ ಮನವಿ ಮಾಡಿಕೊಂಡಿದ್ದಾರೆ. ಕಣ್ಣೂರಿನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 143 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಇದುವರೆಗೆ 260 ಮಂದಿಯನ್ನು ಬಂಧಿಸಲಾಗಿದೆ.