ನವದೆಹಲಿ: ಕೊರೊನಾ ವೈರಸ್ನಿಂದ ದೇಶ ತತ್ತರಿಸಿ ಹೋಗಿದೆ. ಅನೇಕ ಸಾವು ನೋವುಗಳು ಸಂಭವಿಸಿ ಜನಜೀವನ ಅಸ್ಥವ್ಯಸ್ತವಾಗಿದೆ. ಕೊರೊನಾದಿಂದ ತತ್ತರಿಸಿ ಹೋದ ದೇಶ ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ. ಇಂಥಾ ಪರಿಸ್ಥಿತಿಯಲ್ಲಿ ಚಿನಾದ ಹೊಸ ವೈರಸ್ ಒಂದು ಭಾರತಕ್ಕೆ ಕಾಲಿಟ್ಟಿದೆ. ಭಾರತಕ್ಕೆ ಮಾತ್ರವಲ್ಲದೇ ಕರ್ನಾಟಕಕ್ಕೂ ಕಾಲಿಟ್ಟಿದೆ.
ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 60 ಲಕ್ಷ ದಾಟಿದೆ. ಈ ಮಧ್ಯೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ವಿಜ್ಞಾನಿಗಳು ನೀಡಿದ ಮಾಹಿತಿ ಪ್ರಕಾರ, ಚೀನಾದಿಂದ ಕ್ಯಾಟ್ ಕ್ಯೂ ವೈರಸ್ ಭಾರತ ಪ್ರವೇಶಿಸಿದೆ. ಕರ್ನಾಟಕದಲ್ಲಿ ನಡೆದ ಎರಡು ಮಾದರಿ ಪರಿಕ್ಷೇಯಲ್ಲಿ ಇದು ದೃಢಪಟ್ಟಿದೆ.
ಉಣ್ಣೆ, ಸೊಳ್ಳೆ ಮೊದಲಾದ ಕೀಟಗಳಿಂದ ಹರಡುವ ರೋಗ ಇದಾಗಿದೆ. ಭಾರತದಲ್ಲಿ ಇದೇ ರೀತಿಯ ಕ್ಯುಲೆಕ್ಸ್ ಸೊಳ್ಳೆಗಳು ಪತ್ತೆಯಾಗಿದ್ದು, ಪುಣೆಯಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಲಾಜಿ, ಐಸಿಎಂಆರ್ ನ ವಿಜ್ಞಾನಿಗಳು ಭಾರತದಲ್ಲಿ ಇದರ ಪ್ರತಿರೋಧಗಳನ್ನು ಪತ್ತೆಗೆ ಸೆರೆಮ್ ನಡೆಸಿದ್ದಾರೆ.
ಕರ್ನಾಟಕದಲ್ಲಿ 2014 ಮತ್ತು 2017ರಲ್ಲಿ ನಡೆಸಲಾಗಿರುವ ಪರೀಕ್ಷೆಯ ಪ್ರಕಾರ ಕರ್ನಾಟಕದ ಇಬ್ಬರಿಗೆ ಒಂದು ಹಂತದಲ್ಲಿ ಕ್ಯಾಟ್ ಕ್ಯೂ ವೈರಸ್ ತಗಲಿರುವ ಸಾಧ್ಯತೆ ಇದೆ. ಇದು ದೇಶದ ಅರೋಗ್ಯ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.