ಹೊಸದಿಲ್ಲಿ: ತಾಲಿಬಾನ್ ಉಗ್ರರು ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ನನ್ನು ವಶಪಡಿಸಿಕೊಂಡ ನಂತರ ಅಲ್ಲಿ ತಲೆದೋರಿರುವ ಪ್ರಕ್ಷುಬ್ಧ ಪರಿಸ್ಥಿತಿ ಹಿನ್ನೆಲೆಯಲ್ಲಿ ಭಾರತೀಯರನ್ನು ತುರ್ತಾಗಿ ಸ್ವದೇಶಕ್ಕೆ ಕರೆತರುವ ಪ್ರಕ್ರಿಯೆ ಮುಂದುವರಿದಿದೆ. ಮೂರನೇ ಸ್ಥಳಾಂತರದಲ್ಲಿ ಶನಿವಾರ ೮೫ ಜನರನ್ನು ಸ್ವದೇಶಕ್ಕೆ ಕರೆತರಲಾಗಿದೆ.
ಭಾರತೀಯ ವಾಯು ಪಡೆ ವಿಮಾನ (ಐಎಎಫ್ ಸಿ-೧೩೦ ) ಕಾಬೂಲ್ನಿಂದ ಶನಿವಾರ ಬೆಳಗ್ಗೆ ೮೫ ಭಾರತೀಯರನ್ನು ಹೊತ್ತು ತಜಕೀಸ್ತಾನದ ದುಶಾನ್ಬೆಗೆ ಸ್ಥಳಾಂತರಗೊಳಿಸಿತು. ನಂತರ ಭಾರತೀಯರು ಏರ್ ಇಂಡಿಯಾ ವಿಮಾನದಲ್ಲಿ ತಾಯ್ನಾಡಿನತ್ತ ಪ್ರಯಾಣ ಬೆಳೆಸಿದರು.
ಅಫ್ಘಾನಿಸ್ತಾನದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಡುವೆ ನಿರಂತರ ಪ್ರಯತ್ನದ ಬಳಿಕ ಭಾರತೀಯರನ್ನು ಕಾಬೂಲ್ನಿಂದ ತೆರವುಗೊಳಿಸುವ ಹಾದಿ ಸುಗಮವಾಗಿದೆ. ಭಾರತೀಯ ರಾಯಭಾರಿ ರುದ್ರೇಂದ್ರ ಟಂಡನ್, ಉನ್ನತಾಧಿಕಾರಿಗಳು ಮತ್ತು ಪತ್ರಕರ್ತರನ್ನು ಒಳಗೊಂಡ ೧೫೦ ಜನರನ್ನು ಭಾರತೀಯ ವಾಯುಪಡೆ ವಿಮಾನದಲ್ಲಿ ಭಾರತಕ್ಕೆ ಈಗಾಗಲೇ ಸುರಕ್ಷಿತವಾಗಿ ಕರೆತರಲಾಗಿದೆ. ಕಾಬೂಲ್ ಸೇರಿದಂತೆ ವಿವಿಧೆಡೆ ಸಂತ್ರಸ್ತರಾಗಿರುವ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರುವ ಕಾರ್ಯ ಪ್ರಗತಿಯಲ್ಲಿದೆ.
ಕಾಬೂಲ್ನಿಂದ 85 ಭಾರತೀಯರ ಸುರಕ್ಷಿತ ಸ್ಥಳಾಂತರ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.