News Karnataka Kannada
Monday, April 29 2024
ವಿದೇಶ

ಕಾಬೂಲ್‌ ನ ದೇವಾಲಯ ಬಿಟ್ಟು ಬರಲು ಒಪ್ಪದ ಹಿಂದೂ ಅರ್ಚಕ

Kabul Archak
Photo Credit :

ಕಾಬೂಲ್: ಕಾಬೂಲ್‌ನಲ್ಲಿ ಉಳಿದಿರುವ ಏಕೈಕ ಹಿಂದೂ ಅರ್ಚಕರೊಬ್ಬರು ದೇಶ ಬಿಟ್ಟು ಬರುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.ರತನ್ ನಾಥ್ ದೇವಾಲಯದ ಅರ್ಚಕ ಪಂಡಿತ್ ರಾಜೇಶ್ ಕುಮಾರ್ ಎಂಬವರು ಇಂತಹ ನಿಲುವು ತಳೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳು ವೈರಲ್ ಆಗಿವೆ.
ಅಫ್ಗಾನಿಸ್ತಾನದಲ್ಲಿ ತಾಲಿಬಾನ್‌ಗಳು ತಮ್ಮ ಆಕ್ರಮಣವನ್ನು ಮುಂದುವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುಮಾರ್ ಅವರನ್ನು ಕಾಬೂಲ್‌ನಿಂದ ಹೊರಹೋಗುವಂತೆ ಒತ್ತಾಯಿಸಲಾಗಿದೆ. ಅಲ್ಲಿರುವ ಹಲವು ಹಿಂದೂಗಳು ಅವರ ಪ್ರಯಾಣ ಮತ್ತು ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲು ಮುಂದಾಗಿದ್ದರು. ಆದರೆ, ದೇವಾಲಯದ ಬಗ್ಗೆ ಅಚಲ ನಿಷ್ಠೆ ಹೊಂದಿರುವ ಅವರು ದೇಗುಲ ಬಿಟ್ಟು ತೆರಳಲು ಸಿದ್ಧರಿಲ್ಲ. ತಪ್ಪಿಸಿಕೊಳ್ಳುವ ಮಾರ್ಗವನ್ನು ಹುಡುಕುತ್ತಿಲ್ಲ.
ಈ ಬಗ್ಗೆ ತಮ್ಮ ಟ್ವಿಟರ್ ಹ್ಯಾಂಡಲ್ @ಭಾರದ್ವಾಜ್ ಸ್ಪೀ್ಕ್ಸ್‌ನಲ್ಲಿ, ಕಾಬೂಲ್ ನ ರತನ್ ನಾಥ್ ದೇವಸ್ಥಾನದ ಅರ್ಚಕ ಪಂಡಿತ್ ರಾಜೇಶ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದು, ‘ಕೆಲವು ಹಿಂದೂಗಳು ಕಾಬೂಲ್ ಬಿಟ್ಟು ಹೋಗುವಂತೆ ನನ್ನನ್ನು ಒತ್ತಾಯಿಸಿದ್ದಾರೆ. ನನ್ನ ಪ್ರಯಾಣಕ್ಕೆ ಮತ್ತು ಉಳಿಯಲು ಅವಕಾಶ ಮಾಡಿಕೊಡುವುದಾಗಿ ಹೇಳಿದರು. ಆದರೆ, ನನ್ನ ಪೂರ್ವಜರು ನೂರಾರು ವರ್ಷಗಳಿಂದ ಈ ಮಂದಿರಕ್ಕೆ ಸೇವೆ ಸಲ್ಲಿಸಿದ್ದಾರೆ. ನಾನು ಅದನ್ನು ಕೈಬಿಡುವುದಿಲ್ಲ. ತಾಲಿಬಾನ್ ನನ್ನನ್ನು ಕೊಂದರೆ, ನಾನು ಅದನ್ನು ನನ್ನ ಸೇವೆ ಎಂದು ಪರಿಗಣಿಸುತ್ತೇನೆ’. ಎಂದು ಹೇಳಿದ್ಧಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು