ಕಾಬೂಲ್: ಅಫ್ಘಾನಿಸ್ತಾನದಲ್ಲಿ ಒಂದು ಕಡೆ ತಾಲಿಬಾನಿಗಳ ಹಿಂಸೆ ನಡುವೆ, ಕಾಬೂಲ್ ವಿಮಾನ ನಿಲ್ದಾಣದ ಪ್ರವೇಶದ್ವಾರವೊಂದರಲ್ಲಿ ಆತ್ಮಾಹುತಿ ದಾಳಿ ಸಂಭವಿಸಿದೆ.
ಲಭ್ಯವಾಗಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಸ್ಫೋಟದಿಂದಾಗಿ 15 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, 25 ಕ್ಕೂ ಹೆಚ್ಚು ಅಮೆರಿಕದ ಯೋಧರು ಸೇರಿದಂತೆ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾಗಿ ವರದಿಯಾಗಿದೆ. ಕಾಬೂಲ್ ಏರ್ಪೋರ್ಟ್ ಬಳಿ ಸ್ಫೋಟವಾಗುತ್ತಿದ್ದಂತೆ ಈ ಸ್ಥಳದಿಂದ ಸ್ವಲ್ಪ ದೂರದಲ್ಲಿರುವ ಬರೋನ್ ಹೋಟೆಲ್ ಬಳಿ ಮತ್ತೊಂದು ಸ್ಫೋಟ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪೆಂಟಗಾನ್ ವಕ್ತಾರ್ ಜಾನ್ ಕಿರ್ಬೈ ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಕಾಬೂಲ್ ಏರ್ಪೋರ್ಟ್ ಬಳಿ ಬಾಂಬ್ ಸ್ಫೋಟಗೊಂಡಿರುವುದು ನಿಜ ಎಂದು ಹೇಳಿದ್ದಾರೆ. ಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆ, ಈ ಸ್ಥಳದಲ್ಲಿ ಫೈರಿಂಗ್ ಕೂಡ ನಡೆಸಲಾಗಿದೆ. ಇದರಿಂದ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಾವು, ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.ತಾಲಿಬಾನಿ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಬ್ರಿಟನ್ ಎಚ್ಚರಿಕೆ ನೀಡಿತ್ತು. ಅಮೆರಿಕ ಕೂಡ ಕಾಬೂಲ್ ಏರ್ಪೋರ್ಟ್ನಿಂದ ದೂರ ಇರುವಂತೆ ಎಚ್ಚರಿಸಿತ್ತು. ಈ ಬೆನ್ನಲ್ಲೇ ಆತ್ಮಾಹುತಿ ದಾಳಿ ನಡೆದಿದೆ.
ಯಾರೂ ದೇಶಬಿಟ್ಟು ಹೋಗಬೇಡಿ. ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ರಚನೆಯಾಗಲಿದೆ ಎಂದು ತಾಲಿಬಾನಿಗಳು ಆಫ್ಘನ್ ಪ್ರಜೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಸಾವಿರಾರು ಜನರು ವಿದೇಶಕ್ಕೆ ತೆರಳಲು ಕಾಬೂಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಭಾರೀ ಸಂಖ್ಯೆಯಲ್ಲಿ ಜನ ಸೇರುತ್ತಿರುವ ಹಿನ್ನೆಲೆಯಲ್ಲಿ ಭಯ ಹುಟ್ಟಿಸಲು ಉಗ್ರರು ಈ ಬಾಂಬ್ ದಾಳಿ ನಡೆಸಿದ್ದಾರೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ದಾಳಿ ಆಗಿರುವುದನ್ನು ಅಮೆರಿಕ ದೃಢಪಡಿಸಿದೆ. ಈ ಸಮಯದಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ ಎಂದು ಪೆಂಟಗನ್ ತಿಳಿಸಿದೆ. ಅಮೇರಿಕಾಸ ಯೋಧರನ್ನು ಗುರಿಯಾಗಿಸಿ ಈ ಧಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ.
ಸ್ಯಾಂಡಲ್ವುಡ್ ನಟ ಗಣೇಶ್ ಅಭಿನಯದ ಉಲ್ಲಾಸ ಉತ್ಸಾಹ ನಟಿ ಯಾಮಿ ಗೌತಮ್ ಅವರು ಮೇ 10 ರಂದು ಗಂಡು ಮಗುವಿಗೆ…
ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿದ್ದಾರೆ. ಹೀಗಾಗಿ ಇದೀಗ ಇಬ್ರಾಹಿಂ ರೈಸಿ ಸಾವಿನ ನಂತರ…
ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ…
ಸುರಿಯುವ ಮಳೆಯನ್ನು ಲೆಕ್ಕಿಸದೆ ದೈವಾರಾಧನೆಯ ಶ್ರದ್ಧೆ ವ್ಯಕ್ತಪಡಿಸಿರುವ ವಿಡಿಯೋ ಒಂದು ಸದ್ಯ ವೈರಲ್ ಆಗುತ್ತಿದೆ. ಉಡುಪಿ ಜಿಲ್ಲೆಯ ಅಲೆವೂರಿನಲ್ಲಿ ಬಬ್ಬು…
ಏಕಾಏಕಿ ವಿದ್ಯುತ್ ಪ್ರವೇಶಿಸಿದ ಪರಿಣಾಮ ಹಾಗೂ ಹೆಸ್ಕಾಂ ಲೈನ್ ಮೆನ್ , ಕಾಂಟ್ರ್ಯಾಕ್ಟರ್ ನಿರ್ಲಕ್ಷ್ಯದಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡ…
ಪ್ರೀತಿಸಿದ ಹುಡುಗಿ ಆತ್ಮಹತ್ಯೆಗೈದ ಬೆನ್ನಲ್ಲೇ ಹುಡುಗನೂ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅತಿಕಾರಿಬೆಟ್ಟು ನಿವಾಸಿ 20 ವರ್ಷದ ಕಾರ್ತಿಕ್ ಪೂಜಾರಿ…