ವಾಷಿಂಗ್ಟನ್, : ಕಾಬೂಲ್ ವಿಮಾನ ನಿಲ್ದಾಣ ಬಳಿ ನಡೆದ ಸರಣಿ ಆತ್ಮಾಹುತಿ ಬಾಂಬ್ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಖಂಡಿಸಿದ್ದಾರೆ. ಅಮಾಯಕ ನಾಗರೀಕರನ್ನು ಗುರಿಯಾಗಿಸಿಕೊಂಡು ನಡೆಸಿರುವ ಈ ದಾಳಿಯು ಅತ್ಯಂತ ಹೇಯ, ಭಯಾನಕ ಕೃತ್ಯವಾಗಿದೆ. ಅಮಾನವೀಯ, ಅನಾಗರೀಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಫ್ಘನ್ನಲ್ಲಿ ಸದ್ಯ ಪರಿಸ್ಥಿತಿ ಸರಿಯಿಲ್ಲ ಎಂಬುವುದು ಈ ಘಟನೆಯಿಂದ ಸ್ಪಷ್ಟವಾಗುತ್ತಿದೆ. ವಿಶ್ವಸಂಸ್ಥೆಯು ಆಫ್ಘನ್ ಜನರಿಗೆ ಮೊದಲಿನಿಂದಲೂ ನೆರವು ನೀಡುತ್ತಿದ್ದು, ಇದನ್ನು ಮುಂದುವರಿಸಲಿದೆ. ಮತ್ತಷ್ಟು ತುರ್ತು ನೆರವು ನೀಡಲಿದೆ ಎಂದು ಹೇಳಿದ್ದಾರೆ.ಗುರುವಾರ ಸಂಜೆ ಕಾಬೂಲ್ ವಿಮಾನ ನಿಲ್ದಾಣದ ಹೊರಭಾಗದಲ್ಲಿ ಆತ್ಮಾಹುತಿ ಬಾಂಬರ್ ಓರ್ವ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದ. ಘಟನೆಯಲ್ಲಿ ಸುಮಾರು ೬೦ ಕ್ಕೂ ಅಧಿಕ ಜನ ಮೃತಪಟ್ಟಿದ್ದರು. ೧೪೦ ಜನರು ಗಾಯಗೊಂಡಿದ್ದರು. ಈ ದಾಳಿಯ ಹೊಣೆಯನ್ನು ಉಗ್ರ ಸಂಘಟನೆ ಐಸಿಎಸ್-ಕೆ ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.ಇತ್ತೀಚೆಗಷ್ಟೆ ಕಾಬೂಲ್ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು ಉಗ್ರ ದಾಳಿ ಬೆದರಿಕೆ ಇದೆ ಎಂದು ಬ್ರಿಟನ್ ದೇಶ ಹೇಳಿಕೆ ನೀಡಿತ್ತು. ಇದರ ಬೆನ್ನಲ್ಲೇ ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ಸರಣಿ ಬಾಂಬ್ ಸ್ಫೋಟ ಸಂಭವಿಸಿರುವುದು, ಸಾಕಷ್ಟು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಅಫ್ಘನ್ ಆಡಳಿತ ತಾಲಿಬಾನ್ ಉಗ್ರರ ವಶವಾದ ನಂತರ, ಕಾಬೂಲ್ ವಿಮಾನ ನಿಲ್ದಾಣದಿಂದ ವಿದೇಶಗಳಿಗೆ ತೆರಳುತ್ತಿರುವವರ ಸಂಖ್ಯೆ ದುಪ್ಪಟ್ಟಾಗಿದೆ. ಸಾವಿರಾರು ಜನರು ವಿಮಾನ ನಿಲ್ದಾಣ ಆವರಣದಲ್ಲಿ ಬೀಡುಬಿಟ್ಟಿದ್ದಾರೆ.
ಮತ್ತೊಂದೆಡೆ, ದೇಶ ಬಿಟ್ಟು ಹೋಗದಂತೆ ತಾಲಿಬಾನ್ ಉಗ್ರರು ದೇಶವಾಸಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಈ ನಡುವೆ ವಿಮಾನ ನಿಲ್ದಾಣ ಸುತ್ತಮುತ್ತಲು ಸರಣಿ ಬಾಂಬ್ ಸ್ಫೋಟ ಸಂಭವಿಸಿರುವುದು ನಾಗರೀಕರನ್ನು ಬೆಚ್ಚಿ ಬೀಳುವಂತೆ ಮಾಡಿದೆ.
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ
ಐಪಿಎಲ್ ಟೂರ್ನಿಯಲ್ಲಿ ಆರ್ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್ಗಳಿಂದ ಸೋಲಿಸುವ ಮೂಲಕ,…
ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…
ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.