Categories: ವಿದೇಶ

ಕಾಬೂಲ್ ಸ್ಪೋಟದ ಸಾವಿನ ಸಂಖ್ಯೆ 169ಕ್ಕೆ ಏರಿಕೆ.

ವಾಷಿಂಗ್ಟನ್, ; ಅಮೆರಿಕಾದ 13 ಮಂದಿ ಯೋಧರು ಸೇರಿದಂತೆ 169 ಮಂದಿಯ ಹತ್ಯೆಗೆ ಕಾರಣವಾದ ಕಾಬೂಲ್ ಸ್ಫೋಟದ ಮಾನವ ಬಾಂಬರ್ ಕನಿಷ್ಟ 25 ಕೆಜಿ ಸ್ಫೋಟಕವನ್ನು ತನ್ನೊಂದಿಗೆ ತೆಗೆದುಕೊಂಡು ಹೋಗಿದ್ದ ಎಂದು ಅಮೆರಿಕಾದ ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾನ್ಯವಾಗಿ ಮಾನವ ಬಾಂಬರ್‍ಗಳು ಐದರಿಂದ 10 ಕೆಜಿ ಸ್ಫೋಟವನ್ನು ತೆಗೆದುಕೊಂಡು ಹೋಗುತ್ತಾರೆ. ಆದರೆ ಕಾಬೂಲ್‍ನಲ್ಲಿ ಸ್ಫೋಟಿಸಿಕೊಂಡ ಬಾಂಬರ್‍ಗಳು ತಮ್ಮೊಂದಿಗೆ 25 ಕೆಜಿಗೂ ಹೆಚ್ಚಿನ ಸ್ಫೋಟಕವನ್ನು ತೆಗೆದುಕೊಂಡು ಹೋಗಿದ್ದರು ಎಂದು ಅಮೆರಿಕಾದ ಅಧಿಕಾರಿಗಳು ವಿವರಿಸಿದ್ದಾರೆ.
ಜನ ಸಂದಣಿಯ ನಡುವೆ ಭಾರೀ ಪ್ರಮಾಣದ ಸ್ಫೋಟ ಬಳಸಿದ್ದರಿಂದಾಗಿ ಸಾವು-ನೋವಿನ ಸಂಖ್ಯೆ ಹೆಚ್ಚಾಗಿದೆ ಎಂದು ವಿವರಿಸಲಾಗಿದೆ. ಆಫ್ಘಾನಿಸ್ತಾನದಲ್ಲಿ ಆತಂಕಕಾರಿ ಸನ್ನಿವೇಶದ ಹೊರತಾಗಿಯೂ ಅಮೆರಿಕಾ ಆಗಸ್ಟ್ 31ರ ಒಳಗೆ ತನ್ನ ಸೇನೆಯನ್ನು ವಾಪಾಸ್ ಪಡೆಯಲಿದೆ ಎಂದು ಸ್ಪಷ್ಟಪಡಿಸಲಾಗಿದೆ. ಇದು ಶತ್ರುಗಳನ್ನು ಹಿಮ್ಮೆಟ್ಟಿಸುವ, ಮುಂದಡಿ ಇಡುವ ಹಾಗೂ ಬೆದರಿಕೆಯನ್ನು ಮಣಿಸುವ ಸಮಯ ಎಂದು ನಿತ್ಯದ ಪತ್ರಿಕಾಗೋಷ್ಠಿಯಲ್ಲಿ ಜೆನ್ ಪಕ್ಸಿ ಹೇಳಿದ್ದಾರೆ.
ತಾಲಿಬಾನಿಗಳ ಬೆದರಿಕೆ ಹೊರತಾಗಿಯೂ ನಾವು ನಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ. ಈ ಮೊದಲು ನಾವು ನಿಗದಿ ಪಡಿಸಿದಂತೆ ಆಗಸ್ಟ್ 31ರ ಒಳಗೆ ಸೇನೆಯನ್ನು ಹಿಂಪಡೆಯುತ್ತೇವೆ ಎಂದು ಸ್ಪಷ್ಟ ಪಡಿಸಿದ್ದಾರೆ. ಅನಿಶ್ಚಿತತೆಗೆ ಸಿಲುಕಿದ್ದ ಆಫ್ಘಾನಿಸ್ತಾನದಿಂದ ಈವರೆಗೂ 1.05 ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಪ್ರಾನ್ಸ್ ಕೂಡ ಶುಕ್ರವಾರ ತನ್ನ 3 ಸಾವಿರ ಮಂದಿಯನ್ನು ಸ್ಥಳಾಂತರಿಸಿದೆ. ತಾಲಿಬಾನಿಗಳ ಆಡಳಿತಕ್ಕೆ ಬೆಂಬಲ ನೀಡಿರುವ ಟರ್ಕಿ ಕೂಡ ತನ್ನ ಪ್ರಜೆಗಳನ್ನು ಸ್ಥಳಾಂತರಿಸುತ್ತಿದೆ.

Indresh KC

Recent Posts

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

46 seconds ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

16 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

20 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

43 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

1 hour ago