ಶ್ರೀನಗರ: ಶಾಂತಿ ನೆಲೆಯನ್ನು ಕಾಪಾಡುತ್ತೇವೆ ಎಂದು ಹೇಳಿ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಭಾರತಕ್ಕೆ ಹಸ್ತಾಂತರಿಸಿದ ಕೆಲವೇ ಕ್ಷಣಗಳಲ್ಲಿ ಪಾಕಿಸ್ತಾನ ಕಾಶ್ಮೀರದ ಪೂಂಜ್ ಜಿಲ್ಲೆಯಲ್ಲಿ ಶೆಲ್ ದಾಳಿ ನಡೆಸಿದೆ.
ಶುಕ್ರವಾರ ರಾತ್ರಿ 10.30ರ ಸುಮಾರಿಗೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಹಾಗೂ ತಾಯಿ ಸಾವನ್ನಪ್ಪಿದ್ದಾರೆ. ಗಡಿ ನಿಯಂತ್ರಣ ರೇಖೆ ಬಳಿ ಇರುವ ಝಲ್ಲಾಸ್ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ.
ಸಾವನ್ನಪ್ಪಿದವರನ್ನು ರುಬೀನಾ ಕವಸೇರಾ926), ಮೊಹಮ್ಮದ್ ಶಬ್ನಂ(4) ಮತ್ತು ಶಾಜಿಯಾ ಕೌಸರಾ(3) ಎಂದು ಗುರುತಿಸಲಾಗಿದೆ. ರುಬೀನಾ ಅವರ ಪತಿ ಮೊಹಮ್ಮದ್ ಯೂನಿಸ್ ಅವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.