Categories: ವಿದೇಶ

ಕಾಶ್ಮೀರ ಜನತೆಗೆ ತಮ್ಮ ಸರ್ಕಾರದ ಬೆಂಬಲ ಘೋಷಿಸಿದ ಪಾಕ್

ಇಸ್ಲಾಮಾಬಾದ್ : ನೆರೆ ದೇಶಗಳಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು ತಮ್ಮ ದೇಶ ಸೂಕ್ಷ್ಮವಾಗಿ ಗಮನಿಸಿ ಅರಿವು ಪಡೆದುಕೊಳ್ಳುತ್ತಿದ್ದು ಗಡಿ ಭಾಗದಲ್ಲಿ ಶಾಂತಿಯನ್ನು ಕದಡಲು ಯತ್ನಿಸಿದರೆ ಪಿತೂರಿ ನಡೆಸಿದರೆ ಅದನ್ನು ಮಟ್ಟಹಾಕಲು ಎದುರಿಸಲು ಸಿದ್ಧ ಎಂದು ಪಾಕಿಸ್ತಾನ ಅಧ್ಯಕ್ಷ ಅರಿಫ್ ಅಲ್ವಿ ಎಚ್ಚರಿಸಿದ್ದಾರೆ.

ಪಾಕಿಸ್ತಾನದ ರಕ್ಷಣಾ ದಿನದ ಅಂಗವಾಗಿ ನೀಡಿರುವ ಸಂದೇಶದಲ್ಲಿ ಅವರು, ಕಾಶ್ಮೀರ ಜನತೆಗೆ ತಮ್ಮ ಸರ್ಕಾರದ ಬೆಂಬಲವನ್ನು ಮತ್ತೆ ಘೋಷಿಸಿದ್ದಾರೆ.ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸದೆ ಭಾರತದೊಂದಿಗೆ ಶಾಂತಿ ಮಾತುಕತೆ ಸಾಧ್ಯವೇ ಇಲ್ಲ ಎಂದು ಪುನರುಚ್ಛರಿಸಿದ್ದಾರೆ.

ಕಾಶ್ಮೀರ ಸೇರಿದಂತೆ ಭಾರತದೊಂದಿಗಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಮಯ ಬಂದಿದೆ. ಸಮಸ್ಯೆಗಳನ್ನು ಬಗೆಹರಿಸಿದರೆ ಗಡಿ ಪ್ರದೇಶದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆ ಇಸ್ಲಾಮಾಬಾದ್ ನಲ್ಲಿ ನಡೆದ ರಕ್ಷಣಾ ದಿನ ಆಚರಣೆಯಲ್ಲಿ 31 ಸುತ್ತು ಬಂದೂಕು ವಂದನೆಯೊಂದಿಗೆ ಆರಂಭಿಸಲಾಯಿತು ಎಂದು ಸರ್ಕಾರದ ರೇಡಿಯೊ ಪಾಕಿಸ್ತಾನ ವರದಿ ಮಾಡಿದೆ.
Raksha Deshpande

Recent Posts

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

21 mins ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

36 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

60 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

2 hours ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

2 hours ago