Categories: ವಿದೇಶ

ಕುಡಿದ ಅಮಲಿನಲ್ಲಿ ರೆಸ್ಟೋರೆಂಟ್ ಕಟ್ಟಡದಿಂದ ಜಿಗಿದು ಮಾಜಿ ಸಚಿವನ ಪುತ್ರ ಸಾವು

ನವದೆಹಲಿ: ದೆಹಲಿಯಲ್ಲಿ ಮಣಿಪುರದ ಮಾಜಿ ಸಚಿವ ಎಂ. ಒಕೆಂದ್ರು ಅವರ ಮಗ ಹೌಜ್ ಖಾಸ್ ರೆಸ್ಟೋರೆಂಟ್ ಕಟ್ಟಡದಿಂದ ಬಿದ್ದು ನಿಗೂಢವಾಗಿ ಸಾವನ್ನಪ್ಪಿದ್ದಾನೆ. ಎಂ.ಒಕೆಂದ್ರು ಅವರ ಪುತ್ರ19 ವರ್ಷದ ಸಿದ್ಧಾರ್ಥ್‌ ಮೃತ ಯುವಕ.  ಸಿದ್ಧಾರ್ಥ್‌ ವಿದ್ಯಾಭ್ಯಾಸಕ್ಕಾಗಿ ದೆಹಲಿಯಲ್ಲಿ ತನ್ನ ಸಹೋದರಿಯೊಂದಿಗೆ ನೆಲೆಸಿದ್ದ. ಭಾನುವಾರ ಸಂಜೆ 4:10ರ ಸುಮಾರಿಗೆ ರೆಸ್ಟೋರೆಂಟ್‌ವೊಂದರ 2ನೇ ಮಹಡಿಯಿಂದ ಬಿದ್ದು ಸಿದ್ಧಾರ್ಥ್‌ ಸಾವನ್ನಪ್ಪಿದ್ದಾನೆ. ಸಿದ್ಧಾರ್ಥ್‌ ಕುಡಿದ ಮತ್ತಿನಲ್ಲಿ ರೆಸ್ಟೋರೆಂಟ್‌‌ ಟೆರೇಸ್‌ ಏರಿ ಪಕ್ಕದ ಗೋಡೆಯನ್ನು ಹತ್ತಲು ಯತ್ನಿಸುತ್ತಿದ್ದ. ಆಗ ರೆಸ್ಟೋರೆಂಟ್‌‌ನ ವೇಟರ್‌ ಇದನ್ನು ಗಮನಿಸಿ ಗೋಡೆಯಿಂದ ಕೆಳಗಿಳುವಂತೆ ಸಿದ್ಧಾರ್ಥ್ ನಲ್ಲಿ ಕೇಳಿಕೊಂಡ ಎನ್ನಲಾಗಿದೆ.  ಆದರೆ, ಇದಾದ ಕೆಲ ಹೊತ್ತಿನಲ್ಲೇ ರೆಸ್ಟೋರೆಂಟ್‌ನ 2ನೇ ಮಹಡಿಯಿಂದ ಸಿದ್ಧಾರ್ಥ್‌ ಬಿದ್ದಿದ್ದಾನೆ. ಆಗ ತಕ್ಷಣವೇ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು ಸಿದ್ಧಾರ್ಥ್‌ ಬದುಕುಳಿದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಯುತ್ತಿದ್ದಾರೆ 

 

Desk

Recent Posts

ಭಯಾನಕ ದೃಶ್ಯ : ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಬೆಂಕಿ ತಗುಲಿ 10 ಮಂದಿಗೆ ಗಾಯ

  ಬೈಕ್ ಸ್ಫೋಟಗೊಂಡು ಸುಮಾರು ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಈ ಭಯಾನಕ ಘಟನೆ…

21 seconds ago

ಗುಂಡ್ಲುಪೇಟೆ ಪೊಲೀಸರಿಂದ ಕಾರ್ಯಾಚರಣೆ : ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ 2 ಕೆ.ಜಿ‌ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು…

21 mins ago

13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ : ಪೊಲೀಸ್‌ ಅಲರ್ಟ್‌

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಭಾನುವಾರ ಇ-ಮೇಲ್‌ ಮೂಲಕ ಬೆದರಿಕಯೊಂದು ಬಂದಿದ್ದು ಅದರಂತೆ ದೇಶಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ…

28 mins ago

ಮೂರು ಕೊಲೆ ಕೇಸ್‌ : ಬೆಳ್ಳಂ ಬೆಳಗೆ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ ಕಾಲಿಗೆ…

53 mins ago

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

1 hour ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

2 hours ago