News Karnataka Kannada
Saturday, May 11 2024
ವಿದೇಶ

ಕೊರೊನಾದಿಂದ ಮೃತರಾದ ಶಿಕ್ಷಕರಿಗೆ ₹50 ಲಕ್ಷ ಪರಿಹಾರ ನೀಡಿ- ಎಚ್‌ಡಿಕೆ

Photo Credit :

ಕೊರೊನಾದಿಂದ ಮೃತರಾದ ಶಿಕ್ಷಕರಿಗೆ ₹50 ಲಕ್ಷ ಪರಿಹಾರ ನೀಡಿ- ಎಚ್‌ಡಿಕೆ

ಬೆಂಗಳೂರು: ಉಪ ಚುನಾವಣೆಯಲ್ಲಿ ಕಾರ್ಯನಿರ್ವಹಿಸಿ ಕೋವಿಡ್‌ನಿಂದ ಮೃತಪಟ್ಟ ಶಿಕ್ಷಕರಿಗೆ ರಾಜ್ಯ ಸರ್ಕಾರವು ₹50 ಲಕ್ಷ ಪರಿಹಾರ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ವಿಚಾರವಾಗಿ ಸೋಮವಾರ ಬೆಳಿಗ್ಗೆ ಟ್ವೀಟ್‌ ಮಾಡಿರುವ ಅವರು, ‘ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ ₹50 ಲಕ್ಷ ಪರಿಹಾರ ನೀಡುವಂತೆ ನಾನು ಆಗ್ರಹಿಸುತ್ತೇನೆ’ ಎಂದಿದ್ದಾರೆ.
‘145ಕ್ಕೂ ಹೆಚ್ಚು ಶಿಕ್ಷಕರು ಹೈದರಾಬಾದ್-ಕರ್ನಾಟಕದಲ್ಲಿ ಅಂದರೆ ಕಲ್ಯಾಣ ಕರ್ನಾಟಕದಲ್ಲಿ ಮೃತಪಟ್ಟಿದ್ದಾರೆ. ಸರ್ಕಾರ ಕೊಟ್ಟ ಆದೇಶ ಪಾಲಿಸಿ ರಾಜ್ಯದಾದ್ಯಂತ ಇನ್ನೂ ಹಲವು ಶಿಕ್ಷಕರ ಪ್ರಾಣ ಹೋಗಿದೆ’ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.’ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಬೇಕು. ಅವರನ್ನು ಚುನಾವಣೆ ಹಾಗೂ ಮತ್ಯಾವುದೋ ಕಾರಣಕ್ಕೆ ನಿಯೋಜಿಸಿದ ಸರ್ಕಾರವೇ ಈ ಸಾವುಗಳ ಸಂಪೂರ್ಣ ಹೊಣೆ ಹೊರಬೇಕು. ಇನ್ನೂ ಸಾವಿರಾರು ಶಿಕ್ಷಕರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ’ ಎಂದು ಎಚ್‌ಡಿಕೆ ಟ್ವೀಟಿಸಿದ್ದಾರೆ.
‘ಭವಿಷ್ಯ ಕಟ್ಟುವ ಶಿಕ್ಷಕರ ಬಗ್ಗೆ ಸರ್ಕಾರದ ಉಡಾಫೆ ಹಾಗೂ ದಿವ್ಯ ನಿರ್ಲಕ್ಷ್ಯ ಧೋರಣೆ ಬಗ್ಗೆ ನನ್ನ ಧಿಕ್ಕಾರವಿದೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ’ ಎಂದು ಜೆಡಿಎಸ್‌ ನಾಯಕ ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು