Categories: ವಿದೇಶ

ಕೊರೊನಾ ನಿಯಮ ಉಲ್ಲಂಘಿಸಿ ಮದುವೆ: ವೈದ್ಯ ವಧು, ವರ ಸೇರಿ ಐವರ ಮೇಲೆ ಪ್ರಕರಣ ದಾಖಲು

 ಹೊಸಪೇಟೆ ;  ಮದುವೆ ಕಾರ್ಯಕ್ರಮಗಳಿಗೆ ನಿಷೇಧವಿದ್ದರೂ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಿಲುವಂಜಿ ಗ್ರಾಮದಲ್ಲಿ ಮದುವೆ ಕಾರ್ಯಕ್ರಮ ನೆರವೇರಿಸಿದ ವೈದ್ಯರಾದ ವಧು ಮತ್ತು ವರ ಸೇರಿ ಐವರ ಮೇಲೆ ಗುರುವಾರ ದೂರು ದಾಖಲಾಗಿದೆ. ನಿಲುವಂಜಿ ಗ್ರಾಮದ ಎನ್.ಬಸವರಾಜ್, ಕಮಲಮ್ಮ, ಬಸವರಾಜ್, ವಧು ಖಾಸಗಿ ವೈದ್ಯೆ ಡಾ. ಬಸವರಾಜೇಶ್ವರಿ (ಡಾ. ನಿಧಿ), ವರ ಡಾ. ಹೆಚ್.ಬಿ.ಸಿದ್ದಪ್ಪ ಮೇಲೆ ದೂರು ದಾಖಲಾಗಿದೆ. ಖಚಿತ ಮಾಹಿತಿ ಪಡೆದ ಪ್ರಭಾರ ಕಂದಾಯ ನಿರೀಕ್ಷಕ ಹೆಚ್.ಹೊನ್ನಪ್ಪ, ಗ್ರಾಮ ಲೆಕ್ಕಾಧಿಕಾರಿ ಎಸ್.ಎಂ.ಚನ್ನಬಸಯ್ಯ, ಪಿಡಿಒ ಅಂಜಿನಪ್ಪ, ನೀರಗಂಟಿ ಕೊಟ್ರೇಶ್ ಅವರ ತಂಡ ನಿಲುವಂಜಿ ಗ್ರಾಮದಲ್ಲಿ ಮದುವೆ ನಡೆಯುತ್ತಿದ್ದ ಸ್ಥಳಕ್ಕೆ ಮೇ. 20ರಂದು ರಾತ್ರಿ 9 ಗಂಟೆಗೆ ಭೇಟಿ ನೀಡಿದಾಗ, 20ರಿಂದ 25 ಜನ ಸೇರಿ ಆರತಿ ಕಾರ್ಯಕ್ರಮ ನಡೆಸುತ್ತಿದ್ದರು. ಮೇ. 21ರ ಶುಕ್ರವಾರ ಮದುವೆ ನಿಶ್ಚಯವಾಗಿತ್ತು. ಆದರೆ ಸಂಬಂಧಿಕರೊಬ್ಬರು ಮೃತರಾಗಿದ್ದರಿಂದ ಗುರುವಾರ ರಾತ್ರಿ 9 ಗಂಟೆಗೆ ಮದುವೆ ಮಾಡಿದ್ದಾರೆ ಎನ್ನಲಾಗಿದೆ.ಬೆಣ್ಣಿಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಟಿ.ಅಂಜಿನಪ್ಪ ನೀಡಿದ ದೂರಿನ ಮೇರೆಗೆ ಚಿಗಟೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Desk

Recent Posts

ಬೀದರ್‌ನಲ್ಲಿ ಪರಿಶಿಷ್ಟ ಮುಖಂಡ ಬಿಜೆಪಿ ಸೇರ್ಪಡೆ

ಔರಾದ್‌ ತಾಲ್ಲೂಕಿನ ವಡಗಾಂವ್‌ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಪರಿಶಿಷ್ಟ ಜಾತಿಯ ಮುಖಂಡ ಬಾಬುರಾವ ಅಡಕೆ ಅವರು ನಗರದಲ್ಲಿ ಶನಿವಾರ ಬಿಜೆಪಿ…

5 mins ago

ಬೀದರ್‌ನಲ್ಲಿ ಸರಳ ವಿಶ್ವಗುರು ಬಸವಣ್ಣ ಜಯಂತಿ ಆಚರಣೆ

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಮೇ 10ರಂದು ಸರಳ ಹಾಗೂ ಸಾಂಕೇತಿಕವಾಗಿ…

16 mins ago

ಗುಮ್ಮಟ ನಗರಿಯಲ್ಲಿ ಕಣ್ಮನ ಸೆಳೆಯುವ ಶಿವಗಿರಿ

ಸಾಮಾನ್ಯವಾಗಿ ಶಿವನ ಮೂರ್ತಿಯನ್ನು ಎಲ್ಲ ಕಡೆ ಸ್ಥಾಪಿಸುತ್ತಾರೆ. ಆದರೆ ವಿಜಯಪುರದಲ್ಲಿನ ಶಿವಮೂರ್ತಿ ಒಂಚೂರು ವಿಭಿನ್ನವಾಗಿದ್ದು, ಇದೊಂದು ಪ್ರವಾಸಿ ಸ್ಥಳವಾಗಿದೆ

26 mins ago

ಉಮೇಶ ವಂದಾಲ ನೇತೃತ್ವದಲ್ಲಿ ಮನೆಮನೆ ಪ್ರಚಾರ

ಲೋಕಸಭಾ ಚುನಾವಣೆ ಹಿನ್ನೆಲೆ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ನಗರದ ವಾರ್ಡ್ ಸಂಖ್ಯೆ 3…

39 mins ago

ಅಸ್ಸಾಂ, ಗೋವಾದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ

ಏತನ್ಮಧ್ಯೆ, ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಹೊಸ ಬೆಲೆಗಳನ್ನು ಬಿಡುಗಡೆ ಮಾಡಿವೆ. ದೇಶದ ಕೆಲವು ರಾಜ್ಯಗಳು ಮತ್ತು…

60 mins ago

ಬಾತ್​ರೂಂನಲ್ಲಿ ಹುಟ್ಟಿದ ನವಜಾತ ಶಿಶು : ತಕ್ಷಣವೆ ಕತ್ತು ಹಿಸುಕಿ ಕೊಂದ ತಾಯಿ

ಕೊಚ್ಚಿಯ ಮಹಿಳೆಯರೊಬ್ಬರು ನವಜಾತ ಶಿಶುವನ್ನು ಕತ್ತು ಹಿಸುಕಿ, ಕೆಳಗೆ ಎಸೆದು ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಕೊಚ್ಚಿಯ  ಅಪಾರ್ಟ್‌ಮೆಂಟ್‌ನಲ್ಲಿ ಪೋಷಕರೊಂದಿಗೆ…

1 hour ago