ವಾರಾಣಸಿ: ದೇಶದಲ್ಲಿ ಕೋವಿಡ್-19 ಲಸಿಕೆ ಕಾರ್ಯಕ್ರಮವು ಆರಂಭವಾಗಿದ್ದು, ಇದರ ಬಗ್ಗೆ ಇರುವ ಗೊಂದಲ ನಿವಾರಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದರು.
ಸಂವಾದದಲ್ಲಿ ಲಸಿಕೆ ಪಡೆದ ಆರೋಗ್ಯ ಕಾರ್ಯಕರ್ತರು ಹಾಗೂ ವೈದ್ಯರು ಭಾಗವಹಿಸಿದ್ದಾರೆ. ಲಸಿಕೆ ತೆಗೆದುಕೊಂಡಿರುವ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರು ಲಸಿಕೆಗೆ ಕ್ಲೀನ್ ಚಿಟ್ ನೀಡಿದರೆ ಆಗ ಲಸಿಕೆಯ ಪರಿಣಾಮದ ಬಗ್ಗೆ ಒಳ್ಳೆಯ ಸಂದೇಶವು ರವಾನೆಯಾಗುವುದು ಎಂದು ಮೋದಿ ವೀಡಿಯೋ ಸಂವಾದದಲ್ಲಿ ತಿಳಿಸಿದರು.
ಲಸಿಕೆಯಿಂದಾಗಿ ಯಾವುದೇ ಸಮಸ್ಯೆಯಾಗಿಲ್ಲ ಎಂದು ವೈದ್ಯರು, ನರ್ಸ್ ಗಳು, ಲ್ಯಾಬ್ ತಂತ್ರಜ್ಞರು ತಿಳಿಸಿದರು.
ಮೋದಿ ಅವರು ಆರೋಗ್ಯ ಕಾರ್ಯಕರ್ತರನ್ನು ಇದೇ ವೇಳೆ ಶ್ಲಾಘಿಸಿದರು.