Categories: ವಿದೇಶ

ಕೋವಿಡ್-19 ಸೋಂಕು ಪ್ರಕರಣದಲ್ಲಿ ನಿರಂತರ ಇಳಿಮುಖ

ಬೆಂಗಳೂರು: ಕಳೆದ 30 ದಿನಗಳ ಅವಧಿಯಲ್ಲಿ ರಾಜ್ಯದಲ್ಲಿ ಕೋವಿಡ್-19 ಹೊಸ ಪ್ರಕರಣಗಳ ಸಂಖ್ಯೆ ಶೇಕಡಾ 25.4ರಷ್ಟು ಕುಸಿದಿದೆ. ಡಿಸೆಂಬರ್ ಆರಂಭದ ಅಂಕಿಅಂಶಗಳನ್ನು ಹೋಲಿಸಿದಾಗ ಟೆಸ್ಟಿಂಗ್ ಅಂಕಿ ಶೇಕಡಾ 5.09ರಷ್ಟು ಕುಸಿದಿದೆ. ರಾಜ್ಯದಲ್ಲಿ ಮಾಡುತ್ತಿದ್ದ ಕೊರೋನ ಟೆಸ್ಟಿಂಗ್ ಸಂಖ್ಯೆ ಕೂಡಾ ಇಳಿಮುಖವಾಗಿದೆ.

ಕಳೆದ ಏಳು ದಿನಗಳಲ್ಲಿ ರಾಜ್ಯಾದ್ಯಂತ 6,787 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 3,731 ಪ್ರಕರಣಗಳು ರಾಜಧಾನಿ ಬೆಂಗಳೂರಿನಲ್ಲಿ ಕಂಡುಬಂದಿದೆ.

ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯದಲ್ಲಿ 9,107 ಪ್ರಕರಣಗಳು ದಾಖಲಾಗಿದ್ದು, 4,728 ಪ್ರಕರಣಗಳು ಬೆಂಗಳೂರು ನಗರದಲ್ಲಿ ಕಂಡು ಬಂದಿದ್ದವು. ಬ್ರಿಟನ್‌ನಲ್ಲಿ ಕಂಡುಬಂದಿರುವ ಹೊಸ ಸ್ವರೂಪದ ಕೊರೊನಾ ವೈರಸ್ ಆತಂಕದ ನಡುವೆಯೂ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳಲ್ಲಿ ಇಳಿಮುಖವಾಗಿದ್ದು ನಿಟ್ಟುಸಿರು ಬಿಡುವಂತಾಗಿದೆ.

ರಾಜ್ಯದಲ್ಲಿ ಭಾನುವಾರ ಹೊಸದಾಗಿ 911 ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ಸರ್ಕಾರ ತಿಳಿಸಿದೆ. ಇದರಲ್ಲಿ ಅತಿ ಹೆಚ್ಚು ಬೆಂಗಳೂರು ನಗರದಲ್ಲಿ 542 ಕಂಡುಬಂದಿದೆ. ಇನ್ನುಳಿದಂತೆ ಮೈಸೂರಿನಲ್ಲಿ 40, ಹಾಸನ 44, ಚಿಕ್ಕ ಬಳ್ಳಾಪುರ 32 ಹಾಗೂ ತುಮಕೂರಿನಲ್ಲಿ 20 ಪ್ರಕರಣಗಳು ದಾಖಲಾಗಿದೆ.

ಕೋವಿಡ್-19 ಪೀಡಿತ ದೇಶಗಳಿಂದ ಇತ್ತೀಚೆಗೆ ಭಾರತಕ್ಕೆ ಮರಳಿದ ಮೂವರಿಗೆ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ತಿಳಿಸಿತ್ತು. ಆದರೆ ಅವರಿಗೆ ಹೊಸ ಅಲೆಯ ಸೋಂಕು ಬಂಡಿತ್ತೆ ಎಂಬುದು ತಿಳಿದು ಬಂದಿಲ್ಲ. ಇದರೊಂದಿಗೆ ವಿದೇಶದಿಂದ ಮರಳಿ ಸೋಂಕು ದೃಢಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.

Desk

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

3 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago