ಶ್ರೀನಗರ: ಗುರುವಾರ ರೈಸಿಂಗ್ ಕಾಶ್ಮೀರ್ ಪತ್ರಿಕೆಯ ಸಂಪಾದಕ ಹಾಗೂ ಖ್ಯಾತ ಪತ್ರಕರ್ತ ಶುಜಾತ್ ಬುಖಾರಿ ಅವರನ್ನು ಗುಂಡಿಟ್ಟು ಹತ್ಯೆ ಮಾಡಿರುವ ಸಂಬಂಧ ದಾಳಿಯಲ್ಲಿ ಭಾಗಿಯಾದ ದುಷ್ಕರ್ಮಿಗಳ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಪೊಲೀಸರು ಸಿಸಿಟಿವಿನಲ್ಲಿ ಸೆರೆಯಾದ ಬೈಕ್ ನಲ್ಲಿ ಓಡಾಡುತ್ತಿದ್ದ ಶಂಕಿತ ವ್ಯಕ್ತಿಗಳನ್ನು ಗಮನಿಸಿ ಅದರ ಆಧಾರ ಮೇಲೆ ಶಂಕಿತರ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.
ಇಲ್ಲಿನ ಪ್ರೆಸ್ ಕಾಲೊನಿಯಲ್ಲಿ ಶುಜಾತ್ ಬುಖಾರಿ ಅವರ ಹತ್ಯೆ ವೇಳೆ ಅವರ ಬಳಿ ಇದ್ದ ಖಾಸಗಿ ಭದ್ರತಾ ಅಧಿಕಾರಿಯೂ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ.
ಘಟನೆ ಸಂಬಂಧ ದಾಳಿಕೋರರ ಪತ್ತೆಗೆ ಸ್ಥಳೀಯರ ನೆರವು ಕೋರಿರುವ ಜಮ್ಮು ಕಾಶ್ಮೀರ ಪೊಲೀಸರು, ಸಿ.ಸಿ ಟಿ.ವಿಯ ದೃಶ್ಯಗಳನ್ನು ಪರಿಶೀಲಿಸಿದ್ದಾರೆ.