ಮಹಾರಾಷ್ಟ್ರ: ವಿಷ ಆಹಾರ ಸೇವಿಸಿ ನಾಲ್ವರು ಸಾವನ್ನಪ್ಪಿದ್ದು, 70ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ಮುಂಬೈನ್ ಖಾಲಾಪುರ್ ಬಳಿಯ ಮಹಾದ್ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಗೃಹ ಪ್ರವೇಶದಲ್ಲಿ ತಯಾರಿಸಿದ ಾಹಾರ ಸೇವಿಸಿ ಈ ದುರ್ಘಟನೆ ನಡೆದಿದೆ.
ಖಾಲಾಪುರ್ ಮುಂಬೈನಿಂದ 75ಕಿ.ಮೀ ದೂರದಲ್ಲಿದೆ.
ಅಸ್ವಸ್ಥಗೊಂಡ 70 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದರಲ್ಲಿ ಐವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ವಕ್ತಾರ ಹೇಳಿದ್ದಾರೆ.
ಘಟನೆ ಹಿನ್ನೆಲೆ: ಸೋಮವಾರ ಸುಭಾಷ್ ಮಾನೆ ಎಂಬುವರು ಮಹಾದ್ ಗ್ರಾಮದಲ್ಲಿ ಗೃಹ ಪ್ರವೇಶ ಸಮಾರಂಭ ಏರ್ಪಡಿಸಿದ್ದರು. ಜೊತೆಗೆ ವಾಸ್ತು ಶಾಂತಿ ಪೂಜೆಯೂ ಇತ್ತು. ಸಮಾರಂಭದ ಬಳಿಕ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಜನರು ಊಟ ಸೇವಿಸಿದ ಬಳಿಕಪ್ರತಿಯೊಬ್ಬರಿಗೆ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದರಲ್ಲಿ ನಾಲ್ವರು ಸಾವನ್ನಪ್ಪಿದ್ದು, 70 ಜನ ಅಸ್ವಸ್ಥರಾಗಿದ್ದಾರೆ.
ಈ ಬಗ್ಗೆ ರಾಯಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.