ಪಟ್ನಾ: ಚಿತ್ರನಟ ಶತ್ರುಘ್ನ ಸಿನ್ಹಾ ಸ್ಪರ್ಧಿಸಿದ್ದ ಪಟ್ನಾ ಸಾಹಿಬ್ ಕ್ಷೇತ್ರದಿಂದ ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ ಬಿಹಾರದ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಿದೆ ಎಂದು ವರದಿಗಳು ಹೇಳಿವೆ.
ಶತ್ರುಘ್ನ ಸಿನ್ಹಾ ಪಕ್ಷದಲ್ಲಿ ಇದ್ದುಕೊಂಡೇ ಪಕ್ಷವನ್ನು ಟೀಕಿಸುತ್ತಿದ್ದರು ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಗಳನ್ನು ಕೂಡ ಟೀಕಿಸಿದ್ದರು. ಇದರಿಂದಾಗಿ ಅವರಿಗೆ ಮುಂದಿನ ಲೋಕಸಭೆ ಟಿಕೆಟ್ ಕೈತಪ್ಪಿದೆ.
ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿದ್ದ ಸಿನ್ಹಾ ಎರಡು ಅವಧಿಗೆ ಈ ಕ್ಷೇತ್ರದಿಂದ ಗೆದ್ದು ಬಂದಿದ್ದಾರೆ. ಸಿನ್ಹಾ ಅವರಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಅವರನ್ನು ಕಾಂಗ್ರೆಸ್ ಅಥವಾ ಆರ್ ಜೆಡಿ ಸೆಳೆಯುವ ಸಾಧ್ಯತೆಯಿದೆ.