ನವದೆಹಲಿ: ಇಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ 2018-2019 ಸಾಲಿನ ಬಜೆಟ್ ಆರ್ಥಿಕ ಬೆಳವಣಿಗೆಗೆ ಉತ್ತೇಜನ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತೃಪ್ತಿ ವ್ಯಕ್ತಪಡಿಸಿದ್ದಾರೆ.
ಕನಿಷ್ಟ ಬೆಂಬಲ ಬೆಲೆ ಕುರಿತು ಜೇಟ್ಲಿ ತೆಗೆದುಕೊಂಡ ನಿರ್ಧಾರವನ್ನು ಮೋದಿ ಅಭಿನಂದಿಸಿದ್ದಾರೆ. ಇದರಿಂದ ರೈತರಿಗೆ ಸಹಕಾರಿಯಾಗಲಿದೆ. ಇನ್ನೂ 2018ರ ಬಜೆಟ್ ನಲ್ಲಿ ಎಲ್ಲ ವಲಯಗಳಿಗೂ ಗಮನ ಹರಿಸಲಾಗಿದ್ದು, ಇದರಿಂದ ಜನರಿಗೆ ಪ್ರಯೋಜನವಾಗಲಿದೆ ಎಂದು ಹೇಳಿದ್ದಾರೆ.
ಈ ಬಜೆಟ್ ಮೂಲಕ ದೇಶದ 1.25 ಶತಕೋಟಿ ಜನರ ಬಯಕೆ ಮತ್ತು ನಿರೀಕ್ಷೆಗಳನ್ನು ಬಲಪಡಿಸಿದಂತಾಗಿದೆ.
ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಯಡಿಯಲ್ಲಿ ಗ್ರಾಮಗಳನ್ನು ಗ್ರಾಮೀಣ ಸಂಪರ್ಕ ವ್ಯವಸ್ಥೆ ಮೂಲಕ ಉನ್ನತ ಶಿಕ್ಷಣ ಸಂಸ್ಥೆ ಮತ್ತು ಆಸ್ಪತ್ರೆಗಳಿಗೆ ಸಂಪರ್ಕ ಕಲ್ಪಿಸಲಾಗುವುದು ಎಂದು ಮೋದಿ ಹೇಳಿದ್ದಾರೆ.