ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ದಿಗಂಬರ ಜೈನ ಮುನಿ ತರುಣ ಸಾಗರ ಅವರು ಶನಿವಾರ ಬೆಳಿಗ್ಗೆ ದೆಹಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ.
51ವರ್ಷದ ತರುಣ ಸಾಗರ ಅವರು ಇಂದು ಬೆಳಗಿನ ಜಾವ 3ಕ್ಕೆ ಪೂರ್ವ ದೆಹಲಿಯ ಕೃಷ್ಣ ನಗರ ಪ್ರದೇಶದಲ್ಲಿರುವ ರಾಧಾಪುರಿ ಜೈನ ಮಂದಿರದಲ್ಲಿ ಕೊನೆಯುಸಿರೆಳೆದಿದ್ದಾರೆ.
ಜೈನ ಮುನಿಯಾಗಿದ್ದರೂ, ಜೈನ ಸಮಾಜದ ಆಚೆಗಿನ ಜನರ ಜತೆ ಉತ್ತಮ ಒಡನಾಟವನ್ನು ಅವರು ಹೊಂದಿದ್ದರು.