Categories: ವಿದೇಶ

ದೇಶದ ಮೊದಲ ಸ್ಪೇಸ್‌ ಶಟಲ್‌ ಯಶಸ್ವಿ ಉಡಾವಣೆ

ಹೊಸದಿಲ್ಲಿ: ದೇಶದ ಮೊದಲ ಮರುಬಳಕೆಯ ಉಪಗ್ರಹ ಉಡ್ಡಯನ ವಾಹಕ ಅಥವಾ “ಸ್ಪೇಸ್‌ ಶಟಲ್‌’ ಅನ್ನು ಇಸ್ರೋ ಸೋಮವಾರ ಬೆಳಗ್ಗೆ ಯಶಸ್ವಿಯಾಗಿ ಉಡಾವಣೆ ಮಾಡಿದೆ.


ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೋ ಅಭಿವೃದ್ಧಿಪಡಿಸಿರುವ ಸುಮಾರು 1.7 ಟನ್ ತೂಕವಿರುವ ಈ ಮರುಬಳಕೆ ಮಾಡಬಹುದಾದ ಬಾಹ್ಯಾಕಾಶ ನೌಕೆ (ಆರ್​ಎಲ್ ವಿ-ಟಿಡಿ)ಯನ್ನು ಉಡಾವಣೆ ಮಾಡಲಾಯಿತು. ಬೆಂಗಳೂರಿನ ರಾಷ್ಟ್ರೀಯ ಏರೋಸ್ಪೇಸ್ ಲ್ಯಾಬೋರೇಟರಿಯಲ್ಲಿಯೇ ಪೂರ್ವಭಾವಿ ಪರೀಕ್ಷೆ ನಡೆಸಿ, ಅದರ ಕಾರ್ಯಕ್ಷಮತೆ ಮತ್ತು ವಿಮಾನ ನಿಯಂತ್ರಣ ಪರೀಕ್ಷೆಯನ್ನು ನಡೆಸಲಾಗಿದೆ. ಮಾನವರಹಿತ ಬಾಹ್ಯಾಕಾಶ ಯೋಜನೆಗಳಿಗೆ ಈ ನೌಕೆ ಸಹಕಾರಿ ಎಂದು ವಿಜ್ಞಾನಿಗಳು ವಿವರಿಸಿದ್ದು, ಇದು ಅಮೆರಿಕದ ನೌಕೆಗಿಂತ ಆರು ಪಟ್ಟು ಚಿಕ್ಕದಾಗಿದೆ. ಸಂಪೂರ್ಣ  ಸ್ವದೇಶಿ  ನಿರ್ಮಿತ ಮರು ಬಳಕೆಯ ತಂತ್ರಜ್ಞಾನವು ಮುಂದಿನ 15 ವರ್ಷಗಳಲ್ಲಿ ಇಸ್ರೋ ಕೈಗೆ ಸಿಗಲಿದ್ದು, ಅದರಿಂದ ಉಪಗ್ರಹ ಉಡಾವಣೆ ಖರ್ಚು ಬರೋಬ್ಬರಿ 10 ಪಟ್ಟು ತಗ್ಗಲಿದೆ. ಜತೆಗೆ ಮಾನವಸಹಿತ ಬಾಹ್ಯಾಕಾಶ ಯಾನಗಳಿಗೆ ಭಾರೀ ಉಪಯೋಗವಾಗಲಿದೆ.

ಈ ನೌಕೆಯು ಯಾವ ರೀತಿ ಆಗಸದಿಂದ ಬಂದು ಭೂಮಿಯ ಮೇಲೆ ಇಳಿಯುತ್ತದೆ, ನಿರ್ದಿಷ್ಟ ಸ್ಥಳವನ್ನು ಹೇಗೆ ತಲುಪುತ್ತದೆ ಎಂಬುದನ್ನು ತಿಳಿಯುವುದಾಗಿದೆ. ಸಮುದ್ರದ ಮೇಲೆ ಇಳಿಯುವ ವ್ಯವಸ್ಥೆಯನ್ನು ಇದಕ್ಕೆ ಮಾಡಲಾಗಿಲ್ಲ. ಹೀಗಾಗಿ ಸಮುದ್ರಕ್ಕೆ ಇಳಿಯು ತ್ತಿದ್ದಂತೆಯೇ ಈ ನೌಕೆಯು ಒಡೆದು ಚೂರಾಗಲಿದೆ. ಯೋಜನೆಯ ಅಂತಿಮ ಹಂತದಲ್ಲಿ ರೆಕ್ಕೆಗಳನ್ನು ಹೊಂದಿರುವ ನೌಕೆಯು ಶ್ರೀಹರಿಕೋಟಾದಲ್ಲಿರುವ ನೌಕಾನೆಲೆಗೆ ಸುರಕ್ಷಿತವಾಗಿ ಬಂದು ಇಳಿಯಲಿದೆ ಎಂದು ಇಸ್ರೋ ವಿಜ್ಞಾನಿ ಕಿರಣ್​ಕುಮಾರ್ ವಿವರಿಸಿದ್ದಾರೆ.

Desk

Recent Posts

ಮಸೀದಿಯೊಳಗೆ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಡೆಡ್‌ಬಾಡಿ ಪತ್ತೆ

ತಾಜ್‌ಮಹಲ್‌ ಸಮೀಪದ ಮಸೀದಿವೊಂದರಲ್ಲಿ ಘೋರ ಕೃತ್ಯ ನಡೆದಿದ್ದು ಅರೆನಗ್ನ ಸ್ಥಿತಿಯಲ್ಲಿ 22 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ…

10 mins ago

ಮಾಜಿ ಸಂಸದ ಎಲ್​ ಆರ್ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಸಂಬಂಧಿಸಿದಂತೆ ಎಚ್‌ ಡಿ ದೇವೆಗೌಡ ಅವರ ವಿರುದ್ದ ಆಡಿಯೋ ಒಂದರಲ್ಲಿ ಅವಹೇಳನವಾಗಿ ನಿಂಧಿಸಿದ ಮಾಜಿ…

36 mins ago

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ಪ್ರಧಾನಿ ಮೋದಿ ಸಂತಾಪ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಅಪಘಾತದಲ್ಲಿ ಇರಾನ್‌ ಅಧ್ಯಕ್ಷ…

45 mins ago

‘ರೇವ್ ಪಾರ್ಟಿ’ ಮೇಲೆ ಸಿಸಿಬಿ ದಾಳಿ; ನಟಿ ಹೇಮಾ ಸೇರಿ ಐವರು ಅರೆಸ್ಟ್

ಆರ್ ಫಾರ್ಮ್ ಹೌಸ್ ನಲ್ಲಿ ರೇವ್​ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪಾರ್ಟಿ ಆಯೋಜಕ ವಾಸು,…

1 hour ago

ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಸಕ್ಸಸ್

ಬಂಡೀಪುರದಲ್ಲಿ ಸೆರೆಹಿಡಿಯಲಾಗಿದ್ದ ಆನೆಯ ಕೂಡುದಂತಕ್ಕೆ ಕತ್ತರಿ ಪ್ರಯೋಗ ಮಾಡಿರುವುದು ಸಕ್ಷಸ್ ಆಗಿದೆ. ಕೂಡು ದಂತದಿಂದ ಆಹಾರ ಸೇವಿಸಲಾಗದೆ ಪರದಾಡುತ್ತಿದ್ದ ಆನೆ…

1 hour ago

ಮತಗಟ್ಟೆ ದ್ವಂಸ ಪ್ರಕರಣ : ಬಿಡುಗಡೆಗೊಂಡ ಗ್ರಾಮಸ್ಥರಿಗೆ ಎನ್. ಮಹೇಶ್ ಸಾಂತ್ವಾನ

ಏಪ್ರಿಲ್ 26 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ…

1 hour ago