ಛತ್ತೀಸಗಡ: ನಕ್ಸಲರು ನಡೆಸಿರುವ ದಾಳಿಯಲ್ಲಿ ನಾಲ್ಕು ಮಂದಿ ಗಡಿ ರಕ್ಷಣಾ ಪಡೆ(ಬಿಎಸ್ ಎಫ್)ಯ ಯೋಧರು ಬಲಿಯಾಗಿದ್ದು, ಇಬ್ಬರು ಗಾಯಗೊಂಡಿರುವ ಘಟನೆಯು ಗುರುವಾರ ಇಲ್ಲಿನ ಕಂಕೇರ್ ಜಿಲ್ಲೆಯಲ್ಲಿ ನಡೆದಿದೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆಯಲು ವಾರ ಬಾಕಿ ಇರುವಾಗಲೇ ಈ ಘಟನೆಯು ನಡೆದಿದೆ. ಚುನಾವಣೆ ಬಹಿಷ್ಕರಿಸುವಂತೆ ನಕ್ಸಲರು ಕರೆ ನೀಡಿದ್ದಾರೆ.
ಚುನಾವಣೆಗೆ ಮೊದಲು ರಾಜ್ಯ ಪೊಲೀಸರು ಮತ್ತು ಪ್ಯಾರಾ ಮಿಲಿಟರಿ ಪಡೆಯು ನಕ್ಸಲರ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿದೆ.
ರಾಜ್ಯದಲ್ಲಿನ 11 ಲೋಕಸಭಾ ಕ್ಷೇತ್ರಗಳ ಮತದಾನವು ಮೂರು ಹಂತದಲ್ಲಿ ನಡೆಯಲಿದೆ. ಎಪ್ರಿಲ್ 11, 18 ಮತ್ತು ಎಪ್ರಿಲ್ 23ರಂದು ಮತದಾನ ನಡೆಯಲಿದೆ.
ಮಾರ್ಚ್ 31ರಂದು ಮಹಿಳೆಯೊಬ್ಬರು ಸೇರಿದಂತೆ ಮೂರು ಮಂದಿ ನಕ್ಸಲರನ್ನು ಬಂಧಿಸಲಾಗಿತ್ತು.