ನವದೆಹಲಿ: ಹಂಪಿ ಎಕ್ಸ್ ಪ್ರೆಸ್ ರೈಲು ವಿಳಂಬವಾಗಿ ನೀಟ್ ಪರೀಕ್ಷೆ ಬರೆಯಲು ವಂಚಿತರಾದ 500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಇದೇ 20ರಂದು ಮರು ಪರೀಕ್ಷೆ ನಡೆಸಲಾಗುವುದು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೆಕರ್ ಅವರು ಹೇಳಿದರು.
ಚೌಕಿದಾರ್ ಪ್ರಕಾಶ್ ಜಾವಡೇಕರ್ ಟ್ವೀಟ್ ಮಾಡಿ, ‘ಕರ್ನಾಟಕದಲ್ಲಿ ನೀಟ್ ಪರೀಕ್ಷೆ ಬರೆಯಲು ವಂಚಿತರಾದ ವಿದ್ಯಾರ್ಥಿಗಳಿಗೆ ಶುಭ ಸುದ್ಧಿ. ರೈಲು ವಿಳಂಬವಾಗಿ ಪರೀಕ್ಷೆ ಬರೆಯಲು ಅಸಾಧ್ಯವಾದ ವಿದ್ಯಾರ್ಥಿಗಳಳಿಗೆ ಇದೇ 20ರಂದು ಮರು ಪರೀಕ್ಷೆ ನಡೆಸಲಾಗುವುದು’ ಎಂದು ಬರೆದುಕೊಂಡಿದ್ದಾರೆ.
ಇದಕ್ಕೆ ಸಿಎಂ ಕುಮಾರಸ್ವಾಮಿ ಅವರು ಪ್ರತಿಕ್ರಯಿಸಿ, ‘ನಮ್ಮ ಮನವಿಯನ್ನು ಗಣನೆಗೆ ತೆಗೆದುಕೊಂಡು ವಿದ್ಯಾರ್ಥಿಗಳಿಗೆ ಸಹಕರಿಸಿದ ಪ್ರಕಾಶ್ ಜಾವಡೆಕರ್ ಹಾಗೂ ಮಾನವ ಸಂಪನ್ಮೂಲ ಸಂಚಿವಾಲಯಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಭಾನುವಾರ ದೇಶದಾದ್ಯಂತ ನೀಟ್ ಪರೀಕ್ಷೆ ನಡೆದಿದ್ದು ಕರ್ನಾಟಕದಲ್ಲಿ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. ಆದರೆ ಹಂಪಿ ಎಕ್ಸ್ ಪ್ರೆಸ್ ರೈಲು ಏಳು ಗಂಟೆ ತಡವಾಗಿದ್ದರಿಂದ ಬೆಂಗಳೂರಿನಲ್ಲಿ 500ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೆ ವಂಚಿರಾಗಿದ್ದರು.
ಈ ಸಂಬಂಧ ಸಿಎಂ ಕುಮಾರಸ್ವಾಮಿ, ವಿದ್ಯಾರ್ಥಿಗಳು ಹಾಗೂ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಅವರು ಮರುಪರೀಕ್ಷೆ ನಡೆಸುವಂತೆ ಸಚಿವ ಜಾವಡೆಕರ್ ಹಾಗೂ ಮಾನವ ಸಂಪನ್ಮೂಲ ಸಚಿವಾಲಯಲ್ಲಿ ಮನವಿ ಮಾಡಿಕೊಂಡಿದ್ದರು. ಇದನ್ನು ಪರಿಗಣನೆಗೆ ತೆಗೆದುಕೊಂಡ ಸಚಿವಾಲಯ ಮರು ಪರೀಕ್ಷೆ ನಡೆಸುವಂತೆ ತಿಳಿಸಿದೆ.