ನವದೆಹಲಿ: ವಜ್ರದ ವ್ಯಾಪಾರಿ ನೀರವ್ ಮೋದಿ ಅವರ ಸುಮಾರು ₹7ಸಾವಿರ ಕೋಟಿ ಆಸ್ತಿಯನ್ನು ತಕ್ಷಣವೇ ಜಪ್ತಿ ಮಾಡಿಕೊಳ್ಳಲು ಅನುಮತಿ ನೀಡುವಂತೆ ಜಾರಿ ನಿರ್ದೇಶನಾಲಯ, ಮುಂಬೈ ವಿಶೇಷ ನ್ಯಾಯಾಲಯವನ್ನು ಕೋರಲು ಮುಂದಾಗಿದ್ದು, ಈ ಪ್ರಕರಣವನ್ನು ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಸಂಬಂಧಿಸಿದಂತೆ ಈ ಕ್ರಮಕೈಗೊಳ್ಳಲಾಗುತ್ತಿದೆ.
ವಂಚನೆಗೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯದಲ್ಲಿ ಕಳೆದ ವಾರ 12 ಸಾವಿರ ಪುಟಗಳ ಆರೋಪಪಟ್ಟಿಯನ್ನು ಜಾರಿ ನಿರ್ದೇಶನಾಲಯ ಸಲ್ಲಿಸಿದೆ. ಈ ಕುರಿತಂತೆ ಸೋಮವಾರ ವಿಚಾರಣೆ ನಡೆಯಲಿದೆ.
ಈ ವೇಳೇ ನೀರವ್ ಮೋದಿ ಅವರ ಭಾರತ ಮತ್ತು ವಿದೇಶದಲ್ಲಿನ ಆಸ್ತಿಯನ್ನು ಜಪ್ತಿ ಮಾಡಿಕೊಳ್ಳಲು ಅನುಮತಿ ನೀಡುವಂತೆ ಜಾರಿ ನಿರ್ದೇಶನಾಲಯದ ವಕೀಲರು ಕೋರಲಿದ್ದಾರೆ ಎಂದು ತಿಳಿದುಬಂದಿದೆ.