ನವದೆಹಲಿ: ಕೃಷಿ ಹಾಗೂ ಆರೋಗ್ಯ ವಲಯಕ್ಕೆ ಹೆಚ್ಚಿನ ಒತ್ತು ನೀಡಿರುವ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಅಭಿವೃದ್ಧಿ ಕೇಂದ್ರಿತ ಬಜೆಟ್ ಮಂಡನೆ ಮಾಡಿದ್ದಾರೆ.
10 ಕೋಟಿ ಬಡ ಕುಟುಂಬಗಳ ಆರೋಗ್ಯ ಸುರಕ್ಷತೆಗಾಗಿ ವಿಶೇಷ ಯೋಜನೆಯನ್ನು ಸಚಿವರು ಪ್ರಕಟಿಸಿದ್ದಾಋಎ. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಿಗಾಗಿ 1200 ಕೋಟಿ ಮೀಸಲಿಟ್ಟಿರುವುದಾಗಿ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಆರೋಗ್ಯ ಸುರಕ್ಷತಾ ಯೋಜನೆಯಿಂದಾಗಿ 10 ಕೋಟಿ ಬಡ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ಸುರಕ್ಷತೆ ಸಿಗಲಿದೆ. ಸರ್ಕಾರವು ಪ್ರತೀ ಕುಟುಂಬಕ್ಕೆ ವರ್ಷಕ್ಕೆ ಐದು ಲಕ್ಷ ಆರೋಗ್ಯ ವಿಮೆ ನೀಡಲಿದ್ದು, ಇದನ್ನು ದೇಶದ 10 ಕೋಟಿ ಬಡ ಕುಟುಂಬಗಳು ಪಡೆಯಲಿದ್ದಾರೆ.
ಬಜೆಟ್ ನ ಮುಖ್ಯಾಂಶಗಳು
* ಕೃಷಿ ಉತ್ಪನ್ನ ಕಂಪೆನಿಗಳಿಗೆ ಶೇ.100ರಷ್ಟು ತೆರಿಗೆ ವಿನಾಯಿತಿ.
* 2018-19ರ ಸಾಲಿನಲ್ಲಿ ಕೃಷಿ ಸಾಂಸ್ಥಿಕ ಸಾಲದ ಮೊತ್ತ 11 ಲಕ್ಷ ಕೋಟಿಗೆ ಹೆಚ್ಚಿಸಲು ಪ್ರಸ್ತಾವ.
* ಬಿದಿರು ಕೃಷಿಗೆ 1,290 ಮೊತ್ತದ ನಿಧಿ
* 2022ರ ವೇಳೆಗೆ ಕೃಷಿಕರ ಆದಾಯ ದ್ವಿಗುಣಗೊಳಿಸಲು ಯೋಜನೆ
* 500 ಕೋಟಿ ಅನುದಾನದಲ್ಲಿ ಆಪರೇಷನ್ ಗ್ರೀನ್ ಯೋಜನೆಗೆ ಪ್ರಸ್ತಾವ
* ಕೃಷಿ ಮಾರುಕಟ್ಟೆಗಳ ಅಭಿವೃದ್ಧಿಗಾಗಿ 2 ಸಾವಿರ ಕೋಟಿ ಮೊತ್ತದಲ್ಲಿ ಕೃಷಿ ಮಾರುಕಟ್ಟೆ ನಿಧಿ ಘೋಷಣೆ
* ಸ್ವಚ್ಛ ಭಾರತ ಯೋಜನೆಯಡಿ 6 ಕೋಟಿ ಶೌಚಾಲಯಗಳ ನಿರ್ಮಾಣ
* ಇನ್ನು 2 ಕೋಟಿ ಶೌಚಾಲಯಗಳ ನಿರ್ಮಾಣದ ಗುರಿ
ಶೈಕ್ಷಣಿಕ ವಲಯಕ್ಕೆ
* ಬುಡಕಟ್ಟು ವಿದ್ಯಾರ್ಥಿಗಳಿಗೆ ನವೋದಯ ಮಾದರಿಯಲ್ಲಿ ಏಕಲವ್ಯ ವಸತಿ ಶಾಲೆ
* ವಡೋದರಾದಲ್ಲಿ ರೈಲ್ವೆ ವಿಶ್ವವಿದ್ಯಾಲಯ ನಿರ್ಮಾಣ ಘೋಷಣೆ
*ಚೆನ್ನೈ ಐಐಟಿಯಲ್ಲಿ 5ಜಿ ಅಧ್ಯಯನ ಕೇಂದ್ರ ಸ್ಥಾಪನೆ ಪ್ರಸ್ತಾವ
* ಗುಣಮಟ್ಟದ ಶಿಕ್ಷಣಕ್ಕಾಗಿ ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್ ಸೌಲಭ್ಯ ಹೆಚ್ಚಿಸಲು ಆದ್ಯತೆ
* 24 ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆ
ಆರೋಗ್ಯಕ್ಕೆ
*ಕ್ಷಯ ರೋಗಿಗಳಿಗಾಗಿ ಆಯುಷ್ಮಾನ್ ಭಾರತ್ ಯೋಜನೆ 600 ಕೋಟಿ ಅನುದಾನ
* ಆರೋಗ್ಯ ಕ್ಷೇಮ ಕೇಂದ್ರಗಳಿಗಾಗಿ 1200 ಕೋಟಿ ಅನುದಾನ
* ಜಿಲ್ಲಾಸ್ಪತ್ರೆಗಳ ಮೇಲ್ದರ್ಜೆಗೇರಿಸಲು ಕ್ರಮ