Categories: ವಿದೇಶ

ನೇಪಾಳ ಪ್ರವಾಸ: ಬುದ್ಧನ ಜನ್ಮಸ್ಥಳಕ್ಕೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಲುಂಬಿನಿ: ನೇಪಾಳ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ ಭೇಟಿ ನೀಡಿದ್ದಾರೆ. ಅವರೊಂದಿಗೆ ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಸಹ ಇದ್ದರು.

ಇಲ್ಲಿನ ದೆಹಲಿ ಅಂತರರಾಷ್ಟ್ರೀಯ ಬೌದ್ಧ ಒಕ್ಕೂಟಕ್ಕೆ (ಐಬಿಸಿ) ಸೇರಿದ ಜಾಗದಲ್ಲಿ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಮಾರಂಭದಲ್ಲಿ ಅವರು ಭಾಗವಹಿಸಿದರು.

ಇದಕ್ಕೂ ಮುನ್ನ, ಗುರು ಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಹಾಗೂ ಅವರ ಪತ್ನಿ ಡಾ. ಅರ್ಜು ರಾಣಾ ದೇವುಬಾ ಅವರು ಮಾಯಾ ದೇವಿ ದೇವಾಲಯದ ಆವರಣದಲ್ಲಿರುವ ಬುದ್ಧದನ ಜನ್ಮದ ಗುರುತು ಕಲ್ಲಿಗೆ ಗೌರವ ಸಲ್ಲಿಸಿದರು. ಇದನ್ನು ಭಗವಾನ್ ಬುದ್ಧನ ನಿಖರವಾದ ಜನ್ಮ ಸ್ಥಳ ಎಂದು ಗುರುತಿಸಲಾಗುತ್ತದೆ. ಈ ವೇಳೆ ಬೌದ್ಧ ವಿಧಿಗಳ ಪ್ರಕಾರ ಪೂಜೆ ನೆರವೇರಿಸಲಾಯ್ತು.

ಈ ನಡುವೆ, ಉಭಯ ನಾಯಕರು ದೇವಾಲಯದ ಪಕ್ಕದಲ್ಲಿರುವ ಅಶೋಕ ಸ್ತಂಭದ ಬಳಿಯ ದೀಪಗಳನ್ನು ಬೆಳಗಿಸಿದರು. ಕ್ರಿಸ್ತಪೂರ್ವ 249 ರಲ್ಲಿ ಚಕ್ರವರ್ತಿ ಅಶೋಕನಿಂದ ಈ ಸ್ತಂಭವು ಸ್ಥಾಪಿಸಲ್ಪಟ್ಟಿದೆ. ಲುಂಬಿನಿಯು ಭಗವಾನ್ ಬುದ್ಧನ ಜನ್ಮಸ್ಥಳವಾಗಿದೆ ಎಂಬುದನ್ನು ಹೇಳುವ ಮೊದಲ ಶಿಲಾಶಾಸನವನ್ನು ಈ ಸ್ತಂಭ ಹೊಂದಿದೆ.

ಇದೇವೇಳೆ, 2014ರಲ್ಲಿ ಮೋದಿ ಲುಂಬಿನಿ ವನಕ್ಕೆ ಕೊಡುಗೆಯಾಗಿ ನೀಡಿದ್ದ ಬೋಧಿ ವೃಕ್ಷದ ಸಸಿಗೆ ಉಭಯ ನಾಯಕರು ನೀರೆರೆದರು. ಈ ಕುರಿತಂತೆ ಚಿತ್ರ ಸಹಿತ ಪ್ರಧಾನಿ ಸಚಿವಾಲಯವು ಟ್ವೀಟ್ ಮಾಡಿದೆ.

2014ರಿಂದ ನೇಪಾಳಕ್ಕೆ ಪ್ರಧಾನಿಯವರ ಐದನೇ ಭೇಟಿ ಇದಾಗಿದೆ. ಉತ್ತರ ಪ್ರದೇಶದ ಕುಶಿನಗರದಿಂದ ಭಾರತೀಯ ವಾಯುಪಡೆಯ ವಿಶೇಷ ಹೆಲಿಕಾಪ್ಟರ್‌ನಲ್ಲಿ ಮೋದಿ ಇಲ್ಲಿಗೆ ಆಗಮಿಸಿದರು.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

7 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

7 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

8 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

8 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

9 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

10 hours ago