ನೇಪಾಳ: ವಿಮಾನ ಪತನದಲ್ಲಿ ಭಾರತೀಯರು ಸೇರಿದಂತೆ 22 ಜನರಿದ್ದ ವಿಮಾನದ ಅವಶೇಷಗಳಿಂದ 21 ಶವಗಳನ್ನು ಹೊರತೆಗೆಯಲಾಗಿದ್ದು, ಎಲ್ಲಾ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವಿಮಾನದಲ್ಲಿ 4 ಭಾರತೀಯರು ಸೇರಿ 22 ಮಂದಿ ಪ್ರಯಾಣಿಸುತ್ತಿದ್ದರು. ಈ ವಿಮಾನ ಅಪಘಾತದಲ್ಲಿ ಯಾರೂ ಬದುಕುಳಿಯಲು ಸಾಧ್ಯವಿಲ್ಲ ಎಂದು ನಮಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆದರೆ ಅಧಿಕೃತ ಹೇಳಿಕೆಯು ಬಾಕಿಯಿದೆ ಎಂದು ಗೃಹ ಸಚಿವಾಲಯದ ವಕ್ತಾರ ಫದೀಂದ್ರ ಮಣಿ ಪೋಖ್ರೆಲ್ ಹೇಳಿದ್ದಾರೆ.
ನೇಪಾಳ ವಿಮಾನ ಪತನಗೊಂಡ ಸ್ಥಳದಲ್ಲಿ ಇದುವರೆಗೆ 21 ಮೃತದೇಹಗಳು ಪತ್ತೆಯಾಗಿವೆ. ಈ ವಿಮಾನವು 14,500 ಅಡಿ ಎತ್ತರದಲ್ಲಿ ಡಿಕ್ಕಿ ಹೊಡೆದ ನಂತರ ಪತನಗೊಂಡಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ. ಈ ಮೃತದೇಹಗಳನ್ನು ಹಿಂಪಡೆಯಲು 15 ನೇಪಾಳ ಸೇನೆಯ ಸೈನಿಕರ ತಂಡವನ್ನು ಸ್ಥಳದ ಬಳಿ ನೇಮಿಸಲಾಗಿದೆ ಎಂದು ನೇಪಾಳ ಸೇನೆಯ ವಕ್ತಾರರು ತಿಳಿಸಿದ್ದಾರೆ. .
ಭಾನುವಾರ ಬೆಳಗ್ಗೆ 10 ಗಂಟೆಗೆ ಪ್ರವಾಸಿ ನಗರವಾದ ಪೊಖರಾದಿಂದ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ತಾರಾ ಏರ್ ನಿರ್ವಹಿಸುತ್ತಿದ್ದ ಟರ್ಬೊಪ್ರಾಪ್ ಟ್ವಿನ್ ಓಟರ್ 9ಎನ್-ಎಇಟಿ ವಿಮಾನ ಸಂಪರ್ಕ ಕಳೆದುಕೊಂಡಿತ್ತು. ಕೆನಡಾ ನಿರ್ಮಿತ ವಿಮಾನವು ಪೋಖರಾ ನಗರದಿಂದ ಮಧ್ಯ ನೇಪಾಳದ ಜನಪ್ರಿಯ ಪ್ರವಾಸಿ ಪಟ್ಟಣವಾದ ಜೋಮ್ಸೋಮ್ಗೆ ಪ್ರಯಾಣಿಸುತ್ತಿತ್ತು. ಈ ವಿಮಾನವು ಮುಸ್ತಾಂಗ್ನಲ್ಲಿನ ಜೋಮ್ಸಮ್ನ ಆಕಾಶದಲ್ಲಿ ಕಾಣಿಸಿಕೊಂಡಿತು. ನಂತರ ಮೌಂಟ್ ಧೌಲಗಿರಿಗೆ ತಿರುಗಿತು. ಆಮೇಲೆ ವಿಮಾನ ಎಲ್ಲಿ ಹೋಯಿತು ಎಂಬುದೇ ಗೊತ್ತಾಗಲಿಲ್ಲ, ವಿಮಾನ ನಾಪತ್ತೆಯಾಯಿತು.
ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…
ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.
ಉತ್ತರ ಪ್ರದೇಶದ ಪಿಲಿಬಿತ್ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…
ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…
ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.