Categories: ವಿದೇಶ

ಪಂಜ್ಶೀರ್ ಪಡೆಯಲು ಹೋರಾಟ: ಸಾವಿರಕ್ಕೂ ಹೆಚ್ಚು ಉಗ್ರರು ವಶಕ್ಕೆ

ಪಂಜ್ಶೀರ್ : ಅಫ್ಘಾನಿಸ್ಥಾನದ ಈಶಾನ್ಯ ಪ್ರಾಂತ್ಯವಾದ ಪಂಜ್ಶೀರ್ ನಲ್ಲಿ 600 ತಾಲಿಬಾನಿಗಳನ್ನು ಪ್ರತಿರೋಧ ಪಡೆಗಳು ಹೊಡೆದುರುಳಿಸಿವೆ. ಪಂಜ್ಶೀರ್ ಇಸ್ಲಾಮಿಕ್ ಗುಂಪಿನ ವಿರುದ್ಧ ಹಿಡಿತ ಹೊಂದಿರುವ ಕೊನೆಯ ಆಫ್ಘನ್ ಪ್ರಾಂತ್ಯವಾಗಿದೆ ಎಂದು ಪ್ರತಿರೋಧ ಪಡೆ ತಿಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಪ್ರತಿರೋಧ ಪಡೆಗಳ ವಕ್ತಾರ ಫಾಹಿಮ್ ದಶ್ತಿ, ಮುಂಜಾನೆಯಿಂದಲೇ ಪಂಜ್ಶೀರ್ ನ ಹಲವು ಜಿಲ್ಲೆಗಳಲ್ಲಿ ತಾಲಿಬಾನ್ ವಿರುದ್ಧ ದಾಳಿ ನಡೆಯುತ್ತಿದ್ದು, ಸುಮಾರು 600 ತಾಲಿಬಾನ್ ಉಗ್ರರನ್ನು ಸದೆಬಡೆಯಲಾಗಿದೆ. ಈ ವೇಳೆ 1000ಕ್ಕೂ ಹೆಚ್ಚು ತಾಲಿಬಾನ್ ಉಗ್ರರನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಆ.31ರಂದು ಇಡೀ ಅಮೆರಿಕ ಸೇನೆಯನ್ನು ವಾಪಸ್ ಕಳುಹಿಸಿದ ಬಳಿಕ ಇಡೀ ಅಫ್ಘಾನಿಸ್ಥಾನವನ್ನು ತಾಲಿಬಾನ್ ತನ್ನ ವಶಕ್ಕೆ ಪಡೆದುಕೊಂಡಿದೆ. ಪಂಜ್ಶಿರ್ ಗಾಗಿ ತಾಲಿಬಾನ್ ಹೋರಾಟ ನಡೆಸುತ್ತಿದ್ದು, ಪ್ರಾಂತ್ಯದ ಏಳು ಜಿಲ್ಲೆಗಳಲ್ಲಿ ನಾಲ್ಕು ಜಿಲ್ಲೆ ತಾಲಿಬಾನ್ ಪಡೆಗಳ ನಿಯಂತ್ರಣದಲ್ಲಿದೆ ತರಲಾಗಿದೆ ಎಂದು ತಾಲಿಬಾನ್ ವಕ್ತಾರ ಬಿಲಾಲ್ ಕರಿಮಿ ತಿಳಿಸಿದ್ದಾರೆ.

Sneha Gowda

Recent Posts

ಅಕ್ಷಯ ತೃತೀಯದಂದು ಲಕ್ಷ್ಮಿಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

2 seconds ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

20 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

9 hours ago