ನವದೆಹಲಿ: ಸುಪ್ರೀಂ ಕೋರ್ಟ್ ಶುಕ್ರವಾರ ಪತ್ರಕರ್ತ ಅರ್ನಬ್ ಗೋಸ್ವಾಮಿಯ ಮಧ್ಯಂತರ ಜಾಮೀನನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ಕೆಲವು ಕಿರುಕುಳಕ್ಕೆ ಅಪರಾಧಿ ಕಾನೂನುಗಳು ಅಸ್ತ್ರವಾಗಬಾರದು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ನವಂಬರ್ 11ರಂದು ಸುಪ್ರೀಂಕೋರ್ಟ್ ಅರ್ನಬ್ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಿತ್ತು. ಮಧ್ಯಂತರ ಜಾಮೀನು ಇನ್ನು ನಾಲ್ಕು ವಾರಗಳ ತನಕ ಮುಂದುವರಿಯಲಿದೆ.
ಜಸ್ಟಿಸ್ ಡಿವೈ ಚಂದ್ರಚೂಡ್ ಅವರನ್ನು ಒಳಗೊಂಡಿರುವ ನ್ಯಾಯಪೀಠವು ಈ ತೀರ್ಪು ನೀಡಿದೆ.