ನವದೆಹಲಿ: ಬಿಜೆಪಿ ವಕ್ತಾರ, ಸಂಸದ ಜಿವಿಎಲ್ ನರಸಿಂಹ ಹಾಗೂ ಭೂಪೇಂದ್ರ ಯಾದವ್ ಮೇಲೆ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ವೇಳೆ ವ್ಯಕ್ತಿಯೊಬ್ಬ ಶೂ ಎಸೆದಿರುವ ಘಟನೆ ಗುರುವಾರ ನಡೆದಿದೆ.
ಪತ್ರಿಕಾಗೋಷ್ಠಿಯಲ್ಲಿ ಇವರಿಬ್ಬರು ಮಾತನಾಡುತ್ತಿದ್ದ ವೇಳೆ ವ್ಯಕ್ತಿ ಶೂ ಎಸೆದಿದ್ದಾನೆ. ತಕ್ಷಣವೇ ಭದ್ರತಾ ಸಿಬ್ಬಂದಿ ಆತನನ್ನು ಹೊರಗೆ ಕರೆದೊಯ್ದಿದ್ದಾರೆ. ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಕಾನ್ಪುರದ ನಿವಾಸಿ ಡಾ. ಶಕ್ತಿ ಭಾರ್ಗವ್ ಎಂದು ಗುರುತಿಸಲಾಗಿದೆ.
ಇದು ವಿರೋಧ ಪಕ್ಷಗಳ ಕುತಂತ್ರ ಎಂದು ಜಿವಿಎಲ್ ನರಸಿಂಹ ಅವರು ಆರೋಪಿಸಿದರು.