ನವದೆಹಲಿ: ಗಣರಾಜ್ಯೋತ್ಸವ ದಿನದಂದು ರೈತರು ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ನಿರ್ಧರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಎರಡು ದಿನಗಳ ಬಳಿಕ ಆದೇಶ ಪ್ರಕಟಿಸಲಿದೆ.
ಕಾನೂನಿನ ಚೌಕಟ್ಟಿನಲ್ಲಿ ಪೊಲೀಸರು ಎಲ್ಲಾ ರೀತಿಯ ಕ್ರಮ ತೆಗೆದುಕೊಳ್ಳಲು ಸ್ವತಂತ್ರರು ಎಂದು ಮುಖ್ಯ ನ್ಯಾಯಾಧೀಶ ಎಸ್.ಎ.ಬೋಬ್ಡೆ ಅವರು ಹೇಳಿದರು.
ಕೃಷಿ ಕಾನೂನುಗಳನ್ನು ಜಾರಿ ಮಾಡಲು ಮುಂದಿನ ಆದೇಶದ ತನಕ ಕಾಯಬೇಕು ಮತ್ತು ಇದಕ್ಕಾಗಿ ನಾಲ್ಕು ಸದಸ್ಯರ ಸಮಿತಿಯನ್ನು ಆಯೋಜನೆ ಮಾಡಿದೆ.