News Karnataka Kannada
Sunday, May 05 2024
ವಿದೇಶ

ಪ್ರಧಾನಿ ಸಚಿವಾಲಯದ ಮೆಟ್ಟಲೇರಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಪ್ರಕರಣ

Photo Credit :

ಪ್ರಧಾನಿ ಸಚಿವಾಲಯದ ಮೆಟ್ಟಲೇರಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಪ್ರಕರಣ

ನವದೆಹಲಿ : ಮೈಸೂರು ಜಿಲ್ಲೆಯಲ್ಲಿ ಐಎಎಸ್ ಅಧಿಕಾರಿಗಳ ನಡುವೆ ನಡೆದಿದ್ದ ವಾದ-ಪ್ರತಿವಾದಗಳ ನಂತರ ಅವರ ವರ್ಗಾವಣೆ ಮಾಡಲಾಗಿತ್ತು. ಇಷ್ಟಾದ ಮೇಲೆಯೂ ಈ ಚರ್ಚೆ ಮುಂದುವರೆದಿದ್ದು, ಜಿಲ್ಲಾಧಿಕಾರಿ ರೋಹಿನಿ ಸಿಂಧುರಿ ವರ್ಗಾವಣೆ ಪ್ರಕರಣ ಇದೀಗ ಪ್ರಧಾನಿ ಸಚಿವಾಲಯದ ಮೆಟ್ಟಿಲೇರಿದೆ.  

 

 ಐಎಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡುವ ಅಧಿಕಾರ ರಾಜ್ಯ ಸರ್ಕಾರ ಹೊಂದಿದೆ . ಆದರೆ ಸೇವಾ ನಿಯಮಗಳು ಕೇಂದ್ರದ ವ್ಯಾಪ್ತಿಗೆ ಒಳಪಟ್ಟಿವೆ . ರೋಹಿಣಿ ಸಿಂಧೂರಿ ಅವರು ವರ್ಗಾವಣೆಯಾದ ಬಳಿಕ ಹಲವು ವ್ಯಕ್ತಿಗಳು ಪತ್ರ ಮತ್ತು ಈ ಮೇಲ್ ಮೂಲಕ ಪ್ರಧಾನಿ ಕಾರ್ಯಾಲಯಕ್ಕೆ ದೂರು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ .

 

 ಮೈಸೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ತರಲು ಸಂಕಲ್ಪ ತೊಟ್ಟಿದ್ದ ಅಧಿಕಾರಿಯೊಬ್ಬರನ್ನು ದಿಢೀರ್ ವರ್ಗ ಮಾಡಲಾಗಿದೆ . ಇದು ಜಿಲ್ಲಾಧಿಕಾರಿಗಳಿಗೆ ಪೂರ್ಣ ಸ್ವಾತಂತ್ರ್ಯ ಎಂಬ ಆಶಯಕ್ಕೆ ವಿರುದ್ಧವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ . ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪ್ರಧಾನಿ ಸಚಿವಾಲಯ ಸ್ಪಷ್ಟಿಕರಣ ಕೇಳುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ . 

 

ಜತೆಗೆ ಮೈಸೂರಿನಲ್ಲಿ ಸದ್ದು ಮಾಡಿರುವ ಭೂ ಹಗರಣವನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ . ಈ ಎಲ್ಲ ಮಾಹಿತಿಯನ್ನು ರೋಹಿಣಿ ಸಿಂಧೂರಿ ಮೇಲಿನ ಅಭಿಮಾನದಿಂದ ಕೆಲವು ವ್ಯಕ್ತಿಗಳು ಪ್ರಧಾನಿ ಸಚಿವಾಲಯಕ್ಕೆ ರವಾನಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು