ನವದೆಹಲಿ : ಮೈಸೂರು ಜಿಲ್ಲೆಯಲ್ಲಿ ಐಎಎಸ್ ಅಧಿಕಾರಿಗಳ ನಡುವೆ ನಡೆದಿದ್ದ ವಾದ-ಪ್ರತಿವಾದಗಳ ನಂತರ ಅವರ ವರ್ಗಾವಣೆ ಮಾಡಲಾಗಿತ್ತು. ಇಷ್ಟಾದ ಮೇಲೆಯೂ ಈ ಚರ್ಚೆ ಮುಂದುವರೆದಿದ್ದು, ಜಿಲ್ಲಾಧಿಕಾರಿ ರೋಹಿನಿ ಸಿಂಧುರಿ ವರ್ಗಾವಣೆ ಪ್ರಕರಣ ಇದೀಗ ಪ್ರಧಾನಿ ಸಚಿವಾಲಯದ ಮೆಟ್ಟಿಲೇರಿದೆ.
ಐಎಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡುವ ಅಧಿಕಾರ ರಾಜ್ಯ ಸರ್ಕಾರ ಹೊಂದಿದೆ . ಆದರೆ ಸೇವಾ ನಿಯಮಗಳು ಕೇಂದ್ರದ ವ್ಯಾಪ್ತಿಗೆ ಒಳಪಟ್ಟಿವೆ . ರೋಹಿಣಿ ಸಿಂಧೂರಿ ಅವರು ವರ್ಗಾವಣೆಯಾದ ಬಳಿಕ ಹಲವು ವ್ಯಕ್ತಿಗಳು ಪತ್ರ ಮತ್ತು ಈ ಮೇಲ್ ಮೂಲಕ ಪ್ರಧಾನಿ ಕಾರ್ಯಾಲಯಕ್ಕೆ ದೂರು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ .
ಮೈಸೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ತರಲು ಸಂಕಲ್ಪ ತೊಟ್ಟಿದ್ದ ಅಧಿಕಾರಿಯೊಬ್ಬರನ್ನು ದಿಢೀರ್ ವರ್ಗ ಮಾಡಲಾಗಿದೆ . ಇದು ಜಿಲ್ಲಾಧಿಕಾರಿಗಳಿಗೆ ಪೂರ್ಣ ಸ್ವಾತಂತ್ರ್ಯ ಎಂಬ ಆಶಯಕ್ಕೆ ವಿರುದ್ಧವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ . ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪ್ರಧಾನಿ ಸಚಿವಾಲಯ ಸ್ಪಷ್ಟಿಕರಣ ಕೇಳುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ .
ಜತೆಗೆ ಮೈಸೂರಿನಲ್ಲಿ ಸದ್ದು ಮಾಡಿರುವ ಭೂ ಹಗರಣವನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ . ಈ ಎಲ್ಲ ಮಾಹಿತಿಯನ್ನು ರೋಹಿಣಿ ಸಿಂಧೂರಿ ಮೇಲಿನ ಅಭಿಮಾನದಿಂದ ಕೆಲವು ವ್ಯಕ್ತಿಗಳು ಪ್ರಧಾನಿ ಸಚಿವಾಲಯಕ್ಕೆ ರವಾನಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…