ಢಾಕಾ : ಕಳೆದ ಎರಡು ದಿನಗಳಿಂದ ಬಾಂಗ್ಲಾ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯನ್ನು ವಿರೋಧಿಸಿ ಬಾಂಗ್ಲಾದೇಶದ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಬಾಂಗ್ಲಾ ದೇಶದ ಸ್ವಾತಂತ್ರ್ಯ ಮಹೋತ್ಸವದ ಸುವರ್ಣ ಸಂಭ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿರುವುದನ್ನು ಬಾಂಗ್ಲಾದಲ್ಲಿ ಕೆಲವು ಮಂದಿ ವಿರೋಧಿಸಿದ್ದಾರೆ ಎಂದು ಹೇಳಲಾಗಿದ್ದು, ಢಾಕಾ ಸೇರಿದಂತೆ ಬಾಂಗ್ಲಾದ ಹಲವು ನಗರಗಳಲ್ಲಿ ಭಾನುವಾರ ಮೂಲಭೂತವಾದಿ ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ .
ಈ ಪ್ರತಿಭಟನೆ ಹಿಂಸಾಚಾರವಾಗಿ ತಿರುಗಿ ಇದರಿಂದ ಹನ್ನೊಂದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅಷ್ಟು ಮಾತ್ರವಲ್ಲದೆ ದುಷ್ಕರ್ಮಿಗಳು, ಪ್ರಾರ್ಥನಾ ಮಂದಿರಗಳ ಮೇಲೂ ದಾಳಿ ನಡೆಸಿದ್ದಾರೆ. ದುಷ್ಕರ್ಮಿಗಳು ಬಾಂಬರ ಎಂಬಲ್ಲಿ ಕಿಡಿಗೇಡಿಗಳು ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ . ಘಟನೆಯಲ್ಲಿ 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.