News Karnataka Kannada
Monday, May 06 2024
ವಿದೇಶ

ಬಾಂಗ್ಲಾದೇಶದ ಹಿಂದೂ ದೇವಾಲಯದ ಮುಂದೆ ಗೋಮಾಂಸ ನೇತು ಹಾಕಿದ ದುಷ್ಕರ್ಮಿಗಳು.!

Prayers for truth, religion and justice in coastal shrines
Photo Credit :

ಢಾಕಾ : ಬಾಂಗ್ಲಾದೇಶದಲ್ಲಿನ ಹಿಂದೂ ದೇವಾಲಯದ ಎದುರು ಗೋಮಾಂಸ ನೇತು ಹಾಕಿ ದುಷ್ಕೃತ್ಯ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ.

ಬಾಂಗ್ಲಾದೇಶದಲ್ಲಿನ ಹಟಿಬಂಧ ಉಪಜಿಲಾ ಜಿಲ್ಲೆಯಲ್ಲಿನ ಗೆಂಡುಕುರಿ ಎಂಬ ಹಳ್ಳಿಯಲ್ಲಿಯೇ ದುಷ್ಕರ್ಮಿಗಳು ಇಂತಹ ಕೃತ್ಯ ಎಸಗಿದ್ದಾರೆ.

ಹಸಿ ಗೋಮಾಂಸವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ, ಆ ಚೀಲವನ್ನು ದೇವಾಲಯದ ಎದುರು ತೂಗು ಹಾಕಿದ್ದಾರೆ. ಅಲ್ಲಿನ ಮೂರು ಹಿಂದೂ ದೇವಾಲಯದಲ್ಲಿ ಈ ರೀತಿ ಮಾಂಸವನ್ನು ತೂಗು ಹಾಕಿ ದುಷ್ಕೃತ್ಯ ಮೆರೆದಿದ್ದಾರೆ.

ಇದಕ್ಕೆ ಅಲ್ಲಿನ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ದೂರು ಸಲ್ಲಿಸಿದ್ದಾರೆ. ಅಲ್ಲಿನ ಪೊಲೀಸ್ ಠಾಣೆಯಲ್ಲಿ ಈ ಘಟನೆ ಕುರಿತಂತೆ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದವರನ್ನು ಬಂಧಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲಿನ ಎರಡು ಕಾಳಿ ದೇವಾಲಯ ಹಾಗೂ ರಾಧಾ ಗೋವಿಂದ ದೇವಾಲಯದ ಎದುರೇ ಗೋಮಾಂಸ ಇರುವ ಪ್ಲಾಸ್ಟಿಕ್ ಚೀಲಗಳು ಪತ್ತೆಯಾಗಿವೆ ಎಂದು ಉಪಜಿಲಾ ಪೂಜಾ ಪರಿಷತ್ತಿನ ಅಧ್ಯಕ್ಷ ದಿಲೀಪ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಗಾಗಲೇ ಹಲವು ಶಂಕಿತ ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು