ನವದೆಹಲಿ: ಕಳೆದ ಲೋಕಸಭೆ ಚುನಾವಣೆಯಲ್ಲಿನ ಕಳಪೆ ಪ್ರದರ್ಶನದ ಬಳಿಕ ಕಾಂಗ್ರೆಸ್ ನ ನಾಯಕತ್ವದ ಬಗ್ಗೆ ಟೀಕಿಸಿದವರಲ್ಲಿ ಕಪಿಲ್ ಸಿಬಲ್ ಅವರು ಒಬ್ಬರು. ಈಗ ಅವರು ಬಿಹಾರ ಚುನಾವಣೆ ಬಳಿಕ ಮತ್ತೊಮ್ಮೆ ನಾಯಕತ್ವದ ವಿರುದ್ಧ ಕಿಡಿಕಾರಿರುವರು.
ಈಗಾಗಲೇ ಮಹಾಘಟಬಂಧನ್ ನ ಮೈತ್ರಿ ಪಕ್ಷವಾಗಿರುವ ಆರ್ ಜೆಡಿ ಕೂಡ ಸೋಲಿಗೆ ಕಾಂಗ್ರೆಸ್ ಕಾರಣವೆಂದು ಹೇಳಿದೆ. ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಅವರು ಪಕ್ಷವು ಸೋಲಿನ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿರುವರು.
ಬಿಹಾರದಲ್ಲಿನ ಕಳಪೆ ಪ್ರದರ್ಶನದ ಬಗ್ಗೆ ಪಕ್ಷದ ಉನ್ನತ ನಾಯಕರು ಮೌನವಾಘಿದ್ದಾರೆ. 2015ರ ಚುನಾವಣೆಗಿಂತಲೂ ಕಾಂಗ್ರೆಸ್ ನ ಸೀಟು ಕಡಿಮೆ ಆಗಿದೆ ಎನ್ನುವುದನ್ನು ಗಮನಿಸಬೇಕು ಎಂದು ಅವರು ತಿಳಿಸಿದರು.
ಬಿಹಾರದಲ್ಲಿನ ಪ್ರದರ್ಶನದ ಬಗ್ಗೆ ಪಕ್ಷದ ಉನ್ನತ ನಾಯಕರು ಮಾತನಾಡಬೇಕಾಗಿದೆ. ಆದರೆ ಅವರು ಎಲ್ಲವೂ ಸರಿಯಾಗಿದೆ ಎಂದು ಭಾವಿಸಿರಬಹುದು ಎಂದರು.